<p>ಕಲಬುರ್ಗಿ: ಪಡಿತರ ಚೀಟಿದಾರರಿಗೆ ಹಂಚಿಕೆ ಮಾಡಬೇಕಾದ ಅಕ್ಕಿಯನ್ನು ಸಂಗ್ರಹಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಪನೂರ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾಮಿನ ಮೇಲೆ ಗ್ರಾಮೀಣ ಠಾಣೆ ಪೊಲೀಸರು ಬುಧವಾರ ರಾತ್ರಿ ದಾಳಿ ನಡೆಸಿ, ಸುಮಾರು ₹ 7 ಲಕ್ಷ ಮೌಲ್ಯದ ಅಕ್ಕಿ ವಶಪಡಿಸಿಕೊಂಡಿದ್ದಾರೆ.</p>.<p>ಪಡಿತರ ಅಕ್ಕಿಯನ್ನು ಸಾರ್ವಜನಿಕರಿಗೆ ವಿತರಣೆ ಮಾಡದೆ, ಕಾಳ ಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಮಾಹಿತಿಯಂತೆಗ್ರಾಮೀಣ ಠಾಣೆಯ ಪಿಐ ಭಾಸು ಚವ್ಹಾಣ ನೇತೃತ್ವದಲ್ಲಿ ಪೊಲೀಸರು ಗೋದಾಮಿನ ಮೇಲೆ ದಾಳಿ ಮಾಡಿದ್ದಾರೆ.</p>.<p>ಗೋದಾಮಿನಲ್ಲಿ ನೂರಾರು ಚೀಲ ಅಕ್ಕಿಯನ್ನು ಸಂಗ್ರಹಿಸಲಾಗಿತ್ತು. ಇದನ್ನು ಪೊಲೀಸರು ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಅವರೈ ಪೊಲೀಸರೊಂದಿಗೆ ಕಾರ್ಯಾಚರಣೆಯಲ್ಲಿ ಭಾಗಿಯಾದರು.</p>.<p>ಕಿರಣಕುಮಾರ, ಮಧುಕರ್ ಮತ್ತು ಭಾಸ್ಕರ್ ಎಂಬುವವರು ಸೇರಿಕೊಂಡು ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹ ಮಾಡುತ್ತಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದಾಳಿ ಕಾಲಕ್ಕೆ ಗೋದಾಮಿನಲ್ಲಿದ್ದವರು ಪರಾರಿಯಾಗಿದ್ದಾರೆ.ಆಹಾರ ಇಲಾಖೆ ಅಧಿಕಾರಿಗಳು ನೀಡಿರುವ ದೂರಿನಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರ್ಗಿ: ಪಡಿತರ ಚೀಟಿದಾರರಿಗೆ ಹಂಚಿಕೆ ಮಾಡಬೇಕಾದ ಅಕ್ಕಿಯನ್ನು ಸಂಗ್ರಹಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಪನೂರ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾಮಿನ ಮೇಲೆ ಗ್ರಾಮೀಣ ಠಾಣೆ ಪೊಲೀಸರು ಬುಧವಾರ ರಾತ್ರಿ ದಾಳಿ ನಡೆಸಿ, ಸುಮಾರು ₹ 7 ಲಕ್ಷ ಮೌಲ್ಯದ ಅಕ್ಕಿ ವಶಪಡಿಸಿಕೊಂಡಿದ್ದಾರೆ.</p>.<p>ಪಡಿತರ ಅಕ್ಕಿಯನ್ನು ಸಾರ್ವಜನಿಕರಿಗೆ ವಿತರಣೆ ಮಾಡದೆ, ಕಾಳ ಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಮಾಹಿತಿಯಂತೆಗ್ರಾಮೀಣ ಠಾಣೆಯ ಪಿಐ ಭಾಸು ಚವ್ಹಾಣ ನೇತೃತ್ವದಲ್ಲಿ ಪೊಲೀಸರು ಗೋದಾಮಿನ ಮೇಲೆ ದಾಳಿ ಮಾಡಿದ್ದಾರೆ.</p>.<p>ಗೋದಾಮಿನಲ್ಲಿ ನೂರಾರು ಚೀಲ ಅಕ್ಕಿಯನ್ನು ಸಂಗ್ರಹಿಸಲಾಗಿತ್ತು. ಇದನ್ನು ಪೊಲೀಸರು ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಅವರೈ ಪೊಲೀಸರೊಂದಿಗೆ ಕಾರ್ಯಾಚರಣೆಯಲ್ಲಿ ಭಾಗಿಯಾದರು.</p>.<p>ಕಿರಣಕುಮಾರ, ಮಧುಕರ್ ಮತ್ತು ಭಾಸ್ಕರ್ ಎಂಬುವವರು ಸೇರಿಕೊಂಡು ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹ ಮಾಡುತ್ತಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದಾಳಿ ಕಾಲಕ್ಕೆ ಗೋದಾಮಿನಲ್ಲಿದ್ದವರು ಪರಾರಿಯಾಗಿದ್ದಾರೆ.ಆಹಾರ ಇಲಾಖೆ ಅಧಿಕಾರಿಗಳು ನೀಡಿರುವ ದೂರಿನಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>