<p><strong>ಕಲಬುರಗಿ</strong>: ಆಳಂದ ತಾಲ್ಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕ್ಯಾಂಟೀನ್ ಗುತ್ತಿಗೆದಾರ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯು ವಿವಿಯ ವಿದ್ಯಾರ್ಥಿ ಕಲ್ಯಾಣ ವಿಭಾಗದ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.</p>.<p>‘ಕ್ಯಾಂಟೀನ್ ನಡೆಸುವ ಗುತ್ತಿಗೆದಾರ ಆದಿಕೇಶವುಲು ಅವರೊಂದಿಗೆ ಮಾತನಾಡಲು ಅರ್ಥಶಾಸ್ತ್ರ ವಿಭಾಗದ ನನ್ನ ಚಿಕ್ಕಪ್ಪನ ಜತೆಗೆ ಕ್ಯಾಂಟೀನ್ಗೆ ತೆರಳಿದ್ದೆ. ಕ್ಯಾಂಟೀನ್ ಭರ್ತಿ ಆಗಿದ್ದರಿಂದ ಕೋಣೆಯೊಳಗೆ ಬರುವಂತೆ ಹೇಳಿ ಕರೆದೊಯ್ದರು. ಕೋಣೆಯಲ್ಲಿ ಮಾತನಾಡಿ ಹೊರಗೆ ಬರುವಾಗ ಆದಿಕೇಶವುಲು ಅವರು ಕೆನ್ನೆಗೆ ಮುತ್ತಿಟ್ಟರು. ಈ ಬಗ್ಗೆ ಪ್ರಶ್ನಿಸಿದಾಗ, ‘ನೀನು ನನ್ನ ಮಗಳಿದ್ದಂತೆ’ ಎಂದು ಪ್ರತಿಕ್ರಿಯಿಸಿದರು’ ಎಂದು ವಿದ್ಯಾರ್ಥಿನಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ವಿವಿಯ ಕುಲಸಚಿವ ಪ್ರೊ.ಆರ್.ಆರ್. ಬಿರಾದಾರ್, ‘ಕ್ಯಾಂಟೀನ್ ಗುತ್ತಿಗೆದಾರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ವಿದ್ಯಾರ್ಥಿ ಕಲ್ಯಾಣ ವಿಭಾಗಕ್ಕೆ ದೂರು ಸಲ್ಲಿಕೆಯಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಮಾಹಿತಿಯನ್ನು ಪಡೆದು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಆಳಂದ ತಾಲ್ಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕ್ಯಾಂಟೀನ್ ಗುತ್ತಿಗೆದಾರ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯು ವಿವಿಯ ವಿದ್ಯಾರ್ಥಿ ಕಲ್ಯಾಣ ವಿಭಾಗದ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.</p>.<p>‘ಕ್ಯಾಂಟೀನ್ ನಡೆಸುವ ಗುತ್ತಿಗೆದಾರ ಆದಿಕೇಶವುಲು ಅವರೊಂದಿಗೆ ಮಾತನಾಡಲು ಅರ್ಥಶಾಸ್ತ್ರ ವಿಭಾಗದ ನನ್ನ ಚಿಕ್ಕಪ್ಪನ ಜತೆಗೆ ಕ್ಯಾಂಟೀನ್ಗೆ ತೆರಳಿದ್ದೆ. ಕ್ಯಾಂಟೀನ್ ಭರ್ತಿ ಆಗಿದ್ದರಿಂದ ಕೋಣೆಯೊಳಗೆ ಬರುವಂತೆ ಹೇಳಿ ಕರೆದೊಯ್ದರು. ಕೋಣೆಯಲ್ಲಿ ಮಾತನಾಡಿ ಹೊರಗೆ ಬರುವಾಗ ಆದಿಕೇಶವುಲು ಅವರು ಕೆನ್ನೆಗೆ ಮುತ್ತಿಟ್ಟರು. ಈ ಬಗ್ಗೆ ಪ್ರಶ್ನಿಸಿದಾಗ, ‘ನೀನು ನನ್ನ ಮಗಳಿದ್ದಂತೆ’ ಎಂದು ಪ್ರತಿಕ್ರಿಯಿಸಿದರು’ ಎಂದು ವಿದ್ಯಾರ್ಥಿನಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ವಿವಿಯ ಕುಲಸಚಿವ ಪ್ರೊ.ಆರ್.ಆರ್. ಬಿರಾದಾರ್, ‘ಕ್ಯಾಂಟೀನ್ ಗುತ್ತಿಗೆದಾರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ವಿದ್ಯಾರ್ಥಿ ಕಲ್ಯಾಣ ವಿಭಾಗಕ್ಕೆ ದೂರು ಸಲ್ಲಿಕೆಯಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಮಾಹಿತಿಯನ್ನು ಪಡೆದು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>