ಕೊರೊನಾ ಕಾಲದಲ್ಲಿ ರಾಜ್ಯದ ಜನತೆ ಹೊಟ್ಟೆ, ಬಟ್ಟೆ, ಆಶ್ರಯ ಮತ್ತು ಉದ್ಯೋಗಕ್ಕಾಗಿ ಪರದಾಡುತ್ತಾ ಆದಾಯ ಇಲ್ಲದೇ ಅತಿಯಾದ ಸಂಕಷ್ಟಕ್ಕೆ ಸಿಲುಕಿ ಸಾವು ಬದುಕಿನ ಮಧ್ಯೆ ಜೀವನ ಸಾಗಿಸುತ್ತಿದ್ದಾರೆ. ರಾಜ್ಯದ ವಿದ್ಯಾರ್ಥಿ ಸಮುದಾಯವೂ ಇದಕ್ಕೆ ಹೊರತಾಗಿಲ್ಲ. ಆದರೆ, ಆಳುವ ಸರ್ಕಾರ ಮಾತ್ರ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.