<p>ಶಹಾಬಾದ್: ‘ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಲವು ದಶಕಗಳಿಂದ ಒಡೆದ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಿದೆ. ಆದರೆ, ಇಂದು ಮುರಿಯುವ ಕೆಲಸ ನಡೆಯುತ್ತಿದೆ’ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುರೇಶ ಮೆಂಗನ ಹೇಳಿದರು.</p>.<p>ನಗರದದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಮೇ 1ರಂದು ನಾಲ್ಕು ದಶಕಗಳ ಜನಾಂಗಣ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಉದ್ದೇಶ ಒಳ್ಳೆದಾಗಿದ್ದರೂ ಕೆಲವು ಲೋಪದೋಷಗಳಿಂದ ದಾರಿ ತಪ್ಪುತ್ತಿದೆ’ ಎಂದರು.</p>.<p>‘ದಸಂಸ ಸ್ಥಳೀಯವಾಗಿ ಅನೇಕ ನಾಯಕರನ್ನು ರಾಜ್ಯಮಟ್ಟದ ನಾಯಕರನ್ನಾಗಿ ಹುಟ್ಟಿ ಹಾಕಿದೆ. ಆದರೆ, ಸಮಾವೇಶದಲ್ಲಿ ಸಂಬಂಧ ಇಲ್ಲದವರನ್ನು ಸೇರಿಸಿಕೊಂಡು ಯಾವ ಉದ್ದೇಶಕ್ಕೆ ಮಾಡುತ್ತಿದ್ದಾರೆ. ಪ್ರಾರಂಭದಿಂದ ಹೋರಾಟದಲ್ಲಿ ಭಾಗವಹಿಸಿದ ಅನೇಕರನ್ನು ಅಗೌರವ ತೋರಿಸಿರುವುದು ತೀವ್ರ ನೋವುಂಟು ಮಾಡಿದೆ’ ಎಂದರು.</p>.<p>‘ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಜರುಗುತ್ತವೆ. ಈ ಸಮಯದಲ್ಲಿ ಸಮಾವೇಶ ಮಾಡುತ್ತಿರುವುದು ಸರಿಯಲ್ಲ. ತಪ್ಪುಗಳನ್ನು ತಿದ್ದಿಕೊಂಡು ಮುಂದೆ ಒಟ್ಟಾಗಿ ಕೆಲಸ ಮಾಡಬೇಕಾಗಿರುವುದು ಅವಶ್ಯಕತೆ ಇದೆ’ ಎಂದು ಕಿವಿಮಾತು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಭರತ ದನ್ನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-31-1464794651</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಹಾಬಾದ್: ‘ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಲವು ದಶಕಗಳಿಂದ ಒಡೆದ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಿದೆ. ಆದರೆ, ಇಂದು ಮುರಿಯುವ ಕೆಲಸ ನಡೆಯುತ್ತಿದೆ’ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುರೇಶ ಮೆಂಗನ ಹೇಳಿದರು.</p>.<p>ನಗರದದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಮೇ 1ರಂದು ನಾಲ್ಕು ದಶಕಗಳ ಜನಾಂಗಣ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಉದ್ದೇಶ ಒಳ್ಳೆದಾಗಿದ್ದರೂ ಕೆಲವು ಲೋಪದೋಷಗಳಿಂದ ದಾರಿ ತಪ್ಪುತ್ತಿದೆ’ ಎಂದರು.</p>.<p>‘ದಸಂಸ ಸ್ಥಳೀಯವಾಗಿ ಅನೇಕ ನಾಯಕರನ್ನು ರಾಜ್ಯಮಟ್ಟದ ನಾಯಕರನ್ನಾಗಿ ಹುಟ್ಟಿ ಹಾಕಿದೆ. ಆದರೆ, ಸಮಾವೇಶದಲ್ಲಿ ಸಂಬಂಧ ಇಲ್ಲದವರನ್ನು ಸೇರಿಸಿಕೊಂಡು ಯಾವ ಉದ್ದೇಶಕ್ಕೆ ಮಾಡುತ್ತಿದ್ದಾರೆ. ಪ್ರಾರಂಭದಿಂದ ಹೋರಾಟದಲ್ಲಿ ಭಾಗವಹಿಸಿದ ಅನೇಕರನ್ನು ಅಗೌರವ ತೋರಿಸಿರುವುದು ತೀವ್ರ ನೋವುಂಟು ಮಾಡಿದೆ’ ಎಂದರು.</p>.<p>‘ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಜರುಗುತ್ತವೆ. ಈ ಸಮಯದಲ್ಲಿ ಸಮಾವೇಶ ಮಾಡುತ್ತಿರುವುದು ಸರಿಯಲ್ಲ. ತಪ್ಪುಗಳನ್ನು ತಿದ್ದಿಕೊಂಡು ಮುಂದೆ ಒಟ್ಟಾಗಿ ಕೆಲಸ ಮಾಡಬೇಕಾಗಿರುವುದು ಅವಶ್ಯಕತೆ ಇದೆ’ ಎಂದು ಕಿವಿಮಾತು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಭರತ ದನ್ನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-31-1464794651</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>