<p><strong>ಶಹಾಬಾದ್: ‘</strong>ದೀಪಾವಳಿ ಹಬ್ಬಕ್ಕೆ ಪಟಾಕಿ ಪರವಾನಿಗೆ ಇದ್ದವರು ಮಾತ್ರ ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು. ಪರವಾನಿಗೆ, ಇಲ್ಲದೆ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಹಶೀಲ್ದಾರ್ ಜಗದೀಶ ಚೌರ್ ಕಟ್ಟುನಿಟ್ಟಿನ ಆದೇಶ ನೀಡಿದರು.</p>.<p>ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ನಡೆದ ನಗರದ ಪಟಾಕಿ ಮಾರಾಟ ಮಾಡುವ ವ್ಯಾಪಾರಿಗಳ ಸಭೆಯಲ್ಲಿ ಅವರು ಮಾತನಾಡಿ, ‘ನಗರ ಜನನಿಬಿಡ ಪ್ರದೇಶದಲ್ಲಿ ಕಿರಾಣ, ಇತರೆ ವ್ಯಾಪಾರ ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡುವುದು ನಿಷೇಧಿಸಿದ್ದು, ಪಟಾಕಿ ಮಾರಾಟಕ್ಕೆ ಪ್ರತ್ಯೇಕ ಸ್ಥಳ ಗುರುತಿಸಿಕೊಡಲಾಗುವುದು’ ಎಂದರು.</p>.<p>ಪರವಾನಿಗೆ ಪಡೆದ ಅಧಿಕೃತ ವ್ಯಾಪಾರಸ್ಥರು ನಿಗದಿತ ಸ್ಥಳದಲ್ಲಿ ತಗಡಿನ ಅಂಗಡಿ ಸಿದ್ಧಪಡಿಸಬೇಕು. ಪ್ರತಿ ಅಂಗಡಿ ಮಧ್ಯೆ ಮೂರು ಮೀಟರ್ ಅಂತರ ಇರಬೇಕು ಎಂಬುದು ಸೇರಿ ಹಲವು ನಿಯಮಗಳ ಕುರಿತು ಮಾಹಿತಿ ನೀಡಿದರು. </p>.<p>ಸಭೆಯಲ್ಲಿ ತಾಪಂ. ಇಒ ಮಲ್ಲಿನಾಥ ರಾವೂರ, ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ, ಪೌರಾಯುಕ್ತ ಡಾ.ಕೆ. ಗುರುಲಿಂಪ್ಪ, ಪಿಎಸ್ಐ ಚಂದ್ರಕಾಂತ ಮೆಕಾಲೆ, ಅಗ್ನಿಶಾಮಕ ದಳದ ಪಿಎಸ್ಐ ನಾಗರಾಜ ಸೇರಿದಂತೆ ಪಟಾಕಿ ಮಾರಾಟಗಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಬಾದ್: ‘</strong>ದೀಪಾವಳಿ ಹಬ್ಬಕ್ಕೆ ಪಟಾಕಿ ಪರವಾನಿಗೆ ಇದ್ದವರು ಮಾತ್ರ ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು. ಪರವಾನಿಗೆ, ಇಲ್ಲದೆ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಹಶೀಲ್ದಾರ್ ಜಗದೀಶ ಚೌರ್ ಕಟ್ಟುನಿಟ್ಟಿನ ಆದೇಶ ನೀಡಿದರು.</p>.<p>ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ನಡೆದ ನಗರದ ಪಟಾಕಿ ಮಾರಾಟ ಮಾಡುವ ವ್ಯಾಪಾರಿಗಳ ಸಭೆಯಲ್ಲಿ ಅವರು ಮಾತನಾಡಿ, ‘ನಗರ ಜನನಿಬಿಡ ಪ್ರದೇಶದಲ್ಲಿ ಕಿರಾಣ, ಇತರೆ ವ್ಯಾಪಾರ ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡುವುದು ನಿಷೇಧಿಸಿದ್ದು, ಪಟಾಕಿ ಮಾರಾಟಕ್ಕೆ ಪ್ರತ್ಯೇಕ ಸ್ಥಳ ಗುರುತಿಸಿಕೊಡಲಾಗುವುದು’ ಎಂದರು.</p>.<p>ಪರವಾನಿಗೆ ಪಡೆದ ಅಧಿಕೃತ ವ್ಯಾಪಾರಸ್ಥರು ನಿಗದಿತ ಸ್ಥಳದಲ್ಲಿ ತಗಡಿನ ಅಂಗಡಿ ಸಿದ್ಧಪಡಿಸಬೇಕು. ಪ್ರತಿ ಅಂಗಡಿ ಮಧ್ಯೆ ಮೂರು ಮೀಟರ್ ಅಂತರ ಇರಬೇಕು ಎಂಬುದು ಸೇರಿ ಹಲವು ನಿಯಮಗಳ ಕುರಿತು ಮಾಹಿತಿ ನೀಡಿದರು. </p>.<p>ಸಭೆಯಲ್ಲಿ ತಾಪಂ. ಇಒ ಮಲ್ಲಿನಾಥ ರಾವೂರ, ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ, ಪೌರಾಯುಕ್ತ ಡಾ.ಕೆ. ಗುರುಲಿಂಪ್ಪ, ಪಿಎಸ್ಐ ಚಂದ್ರಕಾಂತ ಮೆಕಾಲೆ, ಅಗ್ನಿಶಾಮಕ ದಳದ ಪಿಎಸ್ಐ ನಾಗರಾಜ ಸೇರಿದಂತೆ ಪಟಾಕಿ ಮಾರಾಟಗಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>