<p><strong>ಶಹಾಪುರ (ಯಾದಗಿರಿ ಜಿಲ್ಲೆ):</strong> ತಾಲ್ಲೂಕಿನ ಹೊತಪೇಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಳೆತ ಮೊಟ್ಟೆ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಶಾಲಾ ಮಕ್ಕಳು, ಶುಕ್ರವಾರ ತರಗತಿಯಿಂದ ಹೊರಗುಳಿದು <br>ಪ್ರತಿಭಟಿಸಿದರು.</p>.<p>‘ಕಳಪೆ ಮೊಟ್ಟೆ ವಿತರಣೆ ಪ್ರಶ್ನಿಸಿ ದರೆ ಮುಖ್ಯ ಶಿಕ್ಷಕರು, ಶಿಕ್ಷಕರು ಬೆದರಿಸುತ್ತಾರೆ. ಕಡಿಮೆ ಪ್ರಮಾಣದಲ್ಲಿ ತರಕಾರಿ ಪೂರೈಸುತ್ತಿದ್ದು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯ ಹಾಳಾಗಿದೆ. ಮಳೆ ಬಂದರೆ ಕೊಠಡಿಗಳ ಚಾವಣಿ ಸೋರುತ್ತವೆ’ ಎಂದು <br>ವಿದ್ಯಾರ್ಥಿಯೊಬ್ಬರು ದೂರಿದರು.</p>.<p>‘ಶಾಲೆಯ ಅಭಿವೃದ್ಧಿಗಾಗಿ ನಿಧಿ ಪೆಟ್ಟಿಗೆ ಇರಿಸಿದ್ದು, ದೇಣಿಗೆ ರೂಪದಲ್ಲಿ ಹಣ ಹಾಕುವಂತೆ ಮುಖ್ಯ ಶಿಕ್ಷಕರು ಬಲವಂತ ಮಾಡುತ್ತಿದ್ದಾರೆ’ ಎಂದು ಮತ್ತೊಬ್ಬ ವಿದ್ಯಾರ್ಥಿ ದೂರಿದರು. </p>.<p>‘ಶಾಲೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದೇನೆ. ಮೊಟ್ಟೆಯನ್ನು ಸರಿಯಾಗಿ ಬೇಯಿಸಿ ಕೊಡಲು ಸೂಚಿಸಲಾಗಿದೆ. ವಿದ್ಯಾರ್ಥಿ ಗಳಿಂದ ಪರೀಕ್ಷೆ ಶುಲ್ಕ ಪಡೆದಿದ್ದು, ಪಾಲಕರ ಒಪ್ಪಿಗೆ ಮೇರೆಗೆ ಗುಂಪು ಸಮವಸ್ತ್ರ ಖರೀದಿಸಲಾಗಿದೆ’ ಎಂದು ಸಮೂಹ ಸಂಪನ್ಮೂಲ ಅಧಿಕಾರಿ (ಪ್ರಭಾರ) ವೀರಭದ್ರಯ್ಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ (ಯಾದಗಿರಿ ಜಿಲ್ಲೆ):</strong> ತಾಲ್ಲೂಕಿನ ಹೊತಪೇಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಳೆತ ಮೊಟ್ಟೆ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಶಾಲಾ ಮಕ್ಕಳು, ಶುಕ್ರವಾರ ತರಗತಿಯಿಂದ ಹೊರಗುಳಿದು <br>ಪ್ರತಿಭಟಿಸಿದರು.</p>.<p>‘ಕಳಪೆ ಮೊಟ್ಟೆ ವಿತರಣೆ ಪ್ರಶ್ನಿಸಿ ದರೆ ಮುಖ್ಯ ಶಿಕ್ಷಕರು, ಶಿಕ್ಷಕರು ಬೆದರಿಸುತ್ತಾರೆ. ಕಡಿಮೆ ಪ್ರಮಾಣದಲ್ಲಿ ತರಕಾರಿ ಪೂರೈಸುತ್ತಿದ್ದು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯ ಹಾಳಾಗಿದೆ. ಮಳೆ ಬಂದರೆ ಕೊಠಡಿಗಳ ಚಾವಣಿ ಸೋರುತ್ತವೆ’ ಎಂದು <br>ವಿದ್ಯಾರ್ಥಿಯೊಬ್ಬರು ದೂರಿದರು.</p>.<p>‘ಶಾಲೆಯ ಅಭಿವೃದ್ಧಿಗಾಗಿ ನಿಧಿ ಪೆಟ್ಟಿಗೆ ಇರಿಸಿದ್ದು, ದೇಣಿಗೆ ರೂಪದಲ್ಲಿ ಹಣ ಹಾಕುವಂತೆ ಮುಖ್ಯ ಶಿಕ್ಷಕರು ಬಲವಂತ ಮಾಡುತ್ತಿದ್ದಾರೆ’ ಎಂದು ಮತ್ತೊಬ್ಬ ವಿದ್ಯಾರ್ಥಿ ದೂರಿದರು. </p>.<p>‘ಶಾಲೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದೇನೆ. ಮೊಟ್ಟೆಯನ್ನು ಸರಿಯಾಗಿ ಬೇಯಿಸಿ ಕೊಡಲು ಸೂಚಿಸಲಾಗಿದೆ. ವಿದ್ಯಾರ್ಥಿ ಗಳಿಂದ ಪರೀಕ್ಷೆ ಶುಲ್ಕ ಪಡೆದಿದ್ದು, ಪಾಲಕರ ಒಪ್ಪಿಗೆ ಮೇರೆಗೆ ಗುಂಪು ಸಮವಸ್ತ್ರ ಖರೀದಿಸಲಾಗಿದೆ’ ಎಂದು ಸಮೂಹ ಸಂಪನ್ಮೂಲ ಅಧಿಕಾರಿ (ಪ್ರಭಾರ) ವೀರಭದ್ರಯ್ಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>