<p>ಕಲಬುರಗಿ: ಗುರುವಾರ ರಾತ್ರಿ ಶಿವೈಕ್ಯರಾದ ಶರಣ ಬಸವೇಶ್ವರ ಮಹಾಸಂಸ್ಥಾನದ ಎಂಟನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.</p><p>ಶುಕ್ರವಾರ ಸೂರ್ಯೋದಯಕ್ಕೂ ಮುನ್ನವೇ ಭಕ್ತರು ಪ್ರವಾಹೋಪಾದಿಯಲ್ಲಿ ಶರಣಬಸವೇಶರ ಸಂಸ್ಥಾನಕ್ಕೆ ಹರಿದು ಬಂದರು.</p><p>ಶರಣ ಬಸವೇಶ್ವರ ಸಂಸ್ಥಾನದ ದಾಸೋಹ ಮಹಾಮನೆಯ ಎದುರಿನ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ಪುಷ್ಪಾಲಂಕೃತ ಮಂಟಪ ನಿರ್ಮಿಸಿ ಶರಣ ಬಸವಪ್ಪ ಅವರ ಪಾರ್ಥಿವ ಇರಿಸಲಾಗಿದೆ.</p><p>ಮಂಟಪದ ಪಕ್ಕದಲ್ಲಿ ಅಪ್ಪ ಅವರ ಪತ್ನಿ ದಾಕ್ಷಾಯಣಿ ಎಸ್ ಅಪ್ಪ, ಅವರ ಪುತ್ರಿಯರು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸೇರಿದಂತೆ ಅವರ ಹತ್ತಿರ ಸಂಬಂದಿಗಳು ಆಸೀನರಾಗಿದ್ದಾರೆ.</p><p>ಬೆಳಿಗ್ಗೆ ಎಂಟು ಗಂಟೆ ಹೊತ್ತಿಗೆ ಶರಣಬಸವಪ್ಪ ಅಪ್ಪ ಅವರ 'ಪ್ರಸಾದಿ' ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಯಿತು.</p><p>ಬೆಳಿಗ್ಗೆಯೇ ಶಾಸಕ ಅಲ್ಲಮಪ್ರಭು ಪಾಟೀಲ, ಶರಣು ಮೋದಿ ಸೇರಿದಂತೆ ಹಲವು ಗಣ್ಯರು ದರ್ಶನ ಪಡೆದರು.</p><p>ಶರಣ ಬಸವೇಶ್ವರ ದೇವಸ್ಥಾನದ ಅಂತಿಮ ದರ್ಶನಕ್ಕಾಗಿ ಪುರುಷರು ಹಾಗೂ ಮಹಿಳೆಯರಿಗೆ ಸುಸಜ್ಜಿತ ಬ್ಯಾರಿಕೇಡ್ ಹಾಕಿ ಪ್ರತ್ಯೇಕ ಸಾಲುಗಳ ವ್ಯವಸ್ಥೆ ಮಾಡಲಾಗಿದೆ.</p><p>ದೇವಸ್ಥಾನದ ಎದುರಿನ ಜಾತ್ರಾ ಮೈದಾನದಲ್ಲಿ ಭಕ್ತರಿಗೆ ಅನ್ನ, ನೀರಿನ ವ್ಯವಸ್ಥೆ ಮಾಡಲಾಗಿದೆ.</p><p>ಅಂತಿಮದರ್ಶನಕ್ಕೆ ಲಕ್ಷಾಂತರ ಭಕ್ತರು ಹರಿದು ಬರುವ ನಿರೀಕ್ಷೆಗಳಿದ್ದು, ಭಕ್ತರ ದಟ್ಟಣೆ ನಿರ್ವಹಣೆಗಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಗುರುವಾರ ರಾತ್ರಿ ಶಿವೈಕ್ಯರಾದ ಶರಣ ಬಸವೇಶ್ವರ ಮಹಾಸಂಸ್ಥಾನದ ಎಂಟನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.</p><p>ಶುಕ್ರವಾರ ಸೂರ್ಯೋದಯಕ್ಕೂ ಮುನ್ನವೇ ಭಕ್ತರು ಪ್ರವಾಹೋಪಾದಿಯಲ್ಲಿ ಶರಣಬಸವೇಶರ ಸಂಸ್ಥಾನಕ್ಕೆ ಹರಿದು ಬಂದರು.</p><p>ಶರಣ ಬಸವೇಶ್ವರ ಸಂಸ್ಥಾನದ ದಾಸೋಹ ಮಹಾಮನೆಯ ಎದುರಿನ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ಪುಷ್ಪಾಲಂಕೃತ ಮಂಟಪ ನಿರ್ಮಿಸಿ ಶರಣ ಬಸವಪ್ಪ ಅವರ ಪಾರ್ಥಿವ ಇರಿಸಲಾಗಿದೆ.</p><p>ಮಂಟಪದ ಪಕ್ಕದಲ್ಲಿ ಅಪ್ಪ ಅವರ ಪತ್ನಿ ದಾಕ್ಷಾಯಣಿ ಎಸ್ ಅಪ್ಪ, ಅವರ ಪುತ್ರಿಯರು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸೇರಿದಂತೆ ಅವರ ಹತ್ತಿರ ಸಂಬಂದಿಗಳು ಆಸೀನರಾಗಿದ್ದಾರೆ.</p><p>ಬೆಳಿಗ್ಗೆ ಎಂಟು ಗಂಟೆ ಹೊತ್ತಿಗೆ ಶರಣಬಸವಪ್ಪ ಅಪ್ಪ ಅವರ 'ಪ್ರಸಾದಿ' ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಯಿತು.</p><p>ಬೆಳಿಗ್ಗೆಯೇ ಶಾಸಕ ಅಲ್ಲಮಪ್ರಭು ಪಾಟೀಲ, ಶರಣು ಮೋದಿ ಸೇರಿದಂತೆ ಹಲವು ಗಣ್ಯರು ದರ್ಶನ ಪಡೆದರು.</p><p>ಶರಣ ಬಸವೇಶ್ವರ ದೇವಸ್ಥಾನದ ಅಂತಿಮ ದರ್ಶನಕ್ಕಾಗಿ ಪುರುಷರು ಹಾಗೂ ಮಹಿಳೆಯರಿಗೆ ಸುಸಜ್ಜಿತ ಬ್ಯಾರಿಕೇಡ್ ಹಾಕಿ ಪ್ರತ್ಯೇಕ ಸಾಲುಗಳ ವ್ಯವಸ್ಥೆ ಮಾಡಲಾಗಿದೆ.</p><p>ದೇವಸ್ಥಾನದ ಎದುರಿನ ಜಾತ್ರಾ ಮೈದಾನದಲ್ಲಿ ಭಕ್ತರಿಗೆ ಅನ್ನ, ನೀರಿನ ವ್ಯವಸ್ಥೆ ಮಾಡಲಾಗಿದೆ.</p><p>ಅಂತಿಮದರ್ಶನಕ್ಕೆ ಲಕ್ಷಾಂತರ ಭಕ್ತರು ಹರಿದು ಬರುವ ನಿರೀಕ್ಷೆಗಳಿದ್ದು, ಭಕ್ತರ ದಟ್ಟಣೆ ನಿರ್ವಹಣೆಗಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>