<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ): </strong>ಮಳೆಯಿಂದ ಉಂಟಾಗಿರುವ ಬೆಳೆಹಾನಿಗೆ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ನೀಡುತ್ತಿರುವ ಪರಿಹಾರದ ವಿವರವನ್ನು ಗ್ರಾ.ಪಂಗಳಲ್ಲಿ ಪ್ರಕಟಿಸಬೇಕು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ ಒತ್ತಾಯಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರ ಜಮೀನಿನಲ್ಲಿ ಎಷ್ಟು ಬೆಳೆ ಹಾನಿಯಾಗಿದೆ. ಯಾರಿಗೆ ಎಷ್ಟು ಪರಿಹಾರ ಅವರ ಖಾತೆಗೆ ಜಮಾ ಆಗಿದೆ ಎಂಬುದು ಜನತೆಗೆ ತಿಳಿಯಬೇಕು. ಹೀಗಾಗಿ ಪ್ರತಿ ಪಂಚಾಯಿತಿಯಲ್ಲಿ ಪರಿಹಾರದ ವಿವರ ಪ್ರಕಟಿಸುವುದು ಅತ್ಯಂತ ಅಗತ್ಯವಾಗಿದೆ’ ಎಂದರು.</p>.<p>‘ಸರ್ಕಾರ ಬೆಳೆ ಹಾನಿಯ ವೈಜ್ಞಾನಿಕ ಸಮೀಕ್ಷೆ ನಡೆಸಿಲ್ಲ. ಹೆಚ್ಚು ಬೆಳೆಯಾನಿಯಾದರೂ ಕಡಿಮೆ ಪ್ರಮಾಣದ ಪರಿಹಾರ ಖಾತೆಗೆ ಜಮಾ ಮಾಡಲಾಗಿದೆ. ಈ ಕುರಿತು ರೈತರು ದೂರುತ್ತಿದ್ದಾರೆ ಎಂದರು. ಈಗಲೂ ಕಾಲ ಮಿಂಚಿಲ್ಲ. ನಿಖರ ಸರ್ವೆ ನಡೆಸಿ ಹಾನಿಗೆ ತಕ್ಕಷ್ಟು ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ): </strong>ಮಳೆಯಿಂದ ಉಂಟಾಗಿರುವ ಬೆಳೆಹಾನಿಗೆ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ನೀಡುತ್ತಿರುವ ಪರಿಹಾರದ ವಿವರವನ್ನು ಗ್ರಾ.ಪಂಗಳಲ್ಲಿ ಪ್ರಕಟಿಸಬೇಕು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ ಒತ್ತಾಯಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರ ಜಮೀನಿನಲ್ಲಿ ಎಷ್ಟು ಬೆಳೆ ಹಾನಿಯಾಗಿದೆ. ಯಾರಿಗೆ ಎಷ್ಟು ಪರಿಹಾರ ಅವರ ಖಾತೆಗೆ ಜಮಾ ಆಗಿದೆ ಎಂಬುದು ಜನತೆಗೆ ತಿಳಿಯಬೇಕು. ಹೀಗಾಗಿ ಪ್ರತಿ ಪಂಚಾಯಿತಿಯಲ್ಲಿ ಪರಿಹಾರದ ವಿವರ ಪ್ರಕಟಿಸುವುದು ಅತ್ಯಂತ ಅಗತ್ಯವಾಗಿದೆ’ ಎಂದರು.</p>.<p>‘ಸರ್ಕಾರ ಬೆಳೆ ಹಾನಿಯ ವೈಜ್ಞಾನಿಕ ಸಮೀಕ್ಷೆ ನಡೆಸಿಲ್ಲ. ಹೆಚ್ಚು ಬೆಳೆಯಾನಿಯಾದರೂ ಕಡಿಮೆ ಪ್ರಮಾಣದ ಪರಿಹಾರ ಖಾತೆಗೆ ಜಮಾ ಮಾಡಲಾಗಿದೆ. ಈ ಕುರಿತು ರೈತರು ದೂರುತ್ತಿದ್ದಾರೆ ಎಂದರು. ಈಗಲೂ ಕಾಲ ಮಿಂಚಿಲ್ಲ. ನಿಖರ ಸರ್ವೆ ನಡೆಸಿ ಹಾನಿಗೆ ತಕ್ಕಷ್ಟು ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>