ಕಲಬುರಗಿ: ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿರುವ ಮಹಾದಾಸೋಹ ಮಹಾಮನೆಯಲ್ಲಿ ಮಂಗಳವಾರ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಶರಣಬಸವಪ್ಪ ಅಪ್ಪ ಅವರ ಮಹಾದಾಸೋಹ ಜೀವನ ರಚಿಸಿರುವ ‘ಮಹಾದಾಸೋಹ ಸಿದ್ಧಾಂತ ಶಿರೋಮಣಿ’ ಶೀರ್ಷಿಕೆಯ ಹಿಂದಿ ಭಾಷೆಯ ಅಭಿನಂದನ ಗ್ರಂಥ ಲೋಕಾರ್ಪಣೆಗೊಂಡಿತು.
ಸಮಾರಂಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್, ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯೆ ದಾಕ್ಷಾಯಿಣಿ ಅಪ್ಪ, ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಸಾನ್ನಿಧ್ಯ ವಹಿಸಿದ್ದರು.
ಮುಖ್ಯ ಭಾಷಣಕಾರರಾಗಿ ಖ್ಯಾತ ಚಿಂತಕ ವಿಶ್ವಯಾತ್ರಿ ಅಲಿಗಢ್ (ಉತ್ತರ ಪ್ರದೇಶ) ಆಗಮಿಸಿದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿವಿ ಕುಲಪತಿ ಡಾ. ನಿರಂಜನ್ ವಿ. ನಿಷ್ಠಿ, ಅಭಿನಂದನ ಗ್ರಂಥದ ಪ್ರಧಾನ ಸಂಪಾದಕ ಡಾ. ಎಸ್.ಎಂ.ಹಿರೇಮಠ, ಸಂಪಾದಕಿ ಮಂಗಲಾ ವಿ.ಕಪರೆ, ಶರಣಬಸವ ವಿವಿ ಸಮಕುಲಪತಿ ಪ್ರೊ. ವಿ.ಡಿ.ಮೈತ್ರಿ, ಕುಲಸಚಿವ ಅನಿಲ್ ಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಬಸವರಾಜ ಮಠಪತಿ, ಡೀನ್ ಲಕ್ಷ್ಮೀ ಪಾಟೀಲ ಮಾಕಾ ಸೇರಿದಂತೆ ಇತರ ಪ್ರಮುಖರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.