<p><strong>ಕಲಬುರಗಿ</strong>: ಶ್ರಾವಣ ಮಾಸದ ಮೂರನೇ ಸೋಮವಾರದ ಪ್ರಯುಕ್ತ ಕಲಬುರಗಿ, ಯಾದಗಿರಿ, ಬೀದರ್ ಸೇರಿ ಹಲವು ಜಿಲ್ಲೆಗಳ ಸಾವಿರಾರು ಭಕ್ತರು ಶರಣಬಸವೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.</p>.<p>ಸ್ವಾತಂತ್ರ್ಯ ದಿನಾಚರಣೆ ಮತ್ತು ಮೂರನೇ ಸೋಮವಾರ ಒಂದೇ ದಿನ ಬಂದಿದ್ದರಿಂದ ದೇವಸ್ಥಾನ ಆವರಣದಲ್ಲಿ ದೇಶ ಭಕ್ತಿಯ ರಾಷ್ಟ್ರಧ್ವಜ ಹಿಡಿದವರು ಹಾಗೂ ದಾಸೋಹ ಕಾಯಕದ ಅಪ್ಪನ ಭಕ್ತರೂ ಸಾವಿರಾರು ಸಂಖ್ಯೆಯಲ್ಲಿ ನೆರದಿದ್ದರು.</p>.<p>ಬೆಳಗಿನ ಜಾವದಿಂದಲೇ ಶರಣಬಸವೇಶ್ವರರ ಕರ್ತೃ ಗದ್ದುಗೆಯ ಮೂರ್ತಿಗಳನ್ನು ಶುಚಿಗೊಳಿಸಿ, ನಾನಾ ಬಗೆಯ ಹೂಗಳಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ನೆರವೇರಿಸಲಾಯಿತು. ಜಿಟಿಜಿಟಿ ಮಳೆಯ ಮಧ್ಯೆಯೂ ಭಕ್ತರು ದೇವಸ್ಥಾನದತ್ತ ಹೆಜ್ಜೆ ಹಾಕಿದ್ದು ಕಂಡುಬಂತು.</p>.<p>ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿ ಉತ್ಸವ ಕೈಗೊಳ್ಳಲಾಯಿತು. ಪಲ್ಲಕ್ಕಿಯೊಂದಿಗೆ ಭಕ್ತರೂ ದೇವಾಲಯದ ಪ್ರದಕ್ಷಿಣೆ ಹಾಕಿ ತಮ್ಮ ಹರಕೆ ತೀರಿಸಿದರು.</p>.<p>ದೂರದಿಂದಲೇ ಕಾಲ್ನಡಿಗೆಯಲ್ಲಿ ಬಂದ ಭಕ್ತರು ನೈವೇದ್ಯ ಅರ್ಪಿಸಿ, ತೆಂಗಿನಕಾಯಿ ಒಡೆದು ಭಕ್ತಿ ಸಮರ್ಪಿಸಿದರು. ಭಕ್ತರಿಗೆ ದಾಸೋಹ ಮಹಾಮನೆಯಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಶ್ರಾವಣ ಮಾಸದ ಮೂರನೇ ಸೋಮವಾರದ ಪ್ರಯುಕ್ತ ಕಲಬುರಗಿ, ಯಾದಗಿರಿ, ಬೀದರ್ ಸೇರಿ ಹಲವು ಜಿಲ್ಲೆಗಳ ಸಾವಿರಾರು ಭಕ್ತರು ಶರಣಬಸವೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.</p>.<p>ಸ್ವಾತಂತ್ರ್ಯ ದಿನಾಚರಣೆ ಮತ್ತು ಮೂರನೇ ಸೋಮವಾರ ಒಂದೇ ದಿನ ಬಂದಿದ್ದರಿಂದ ದೇವಸ್ಥಾನ ಆವರಣದಲ್ಲಿ ದೇಶ ಭಕ್ತಿಯ ರಾಷ್ಟ್ರಧ್ವಜ ಹಿಡಿದವರು ಹಾಗೂ ದಾಸೋಹ ಕಾಯಕದ ಅಪ್ಪನ ಭಕ್ತರೂ ಸಾವಿರಾರು ಸಂಖ್ಯೆಯಲ್ಲಿ ನೆರದಿದ್ದರು.</p>.<p>ಬೆಳಗಿನ ಜಾವದಿಂದಲೇ ಶರಣಬಸವೇಶ್ವರರ ಕರ್ತೃ ಗದ್ದುಗೆಯ ಮೂರ್ತಿಗಳನ್ನು ಶುಚಿಗೊಳಿಸಿ, ನಾನಾ ಬಗೆಯ ಹೂಗಳಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ನೆರವೇರಿಸಲಾಯಿತು. ಜಿಟಿಜಿಟಿ ಮಳೆಯ ಮಧ್ಯೆಯೂ ಭಕ್ತರು ದೇವಸ್ಥಾನದತ್ತ ಹೆಜ್ಜೆ ಹಾಕಿದ್ದು ಕಂಡುಬಂತು.</p>.<p>ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿ ಉತ್ಸವ ಕೈಗೊಳ್ಳಲಾಯಿತು. ಪಲ್ಲಕ್ಕಿಯೊಂದಿಗೆ ಭಕ್ತರೂ ದೇವಾಲಯದ ಪ್ರದಕ್ಷಿಣೆ ಹಾಕಿ ತಮ್ಮ ಹರಕೆ ತೀರಿಸಿದರು.</p>.<p>ದೂರದಿಂದಲೇ ಕಾಲ್ನಡಿಗೆಯಲ್ಲಿ ಬಂದ ಭಕ್ತರು ನೈವೇದ್ಯ ಅರ್ಪಿಸಿ, ತೆಂಗಿನಕಾಯಿ ಒಡೆದು ಭಕ್ತಿ ಸಮರ್ಪಿಸಿದರು. ಭಕ್ತರಿಗೆ ದಾಸೋಹ ಮಹಾಮನೆಯಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>