<p><strong>ಕಲಬುರಗಿ: ‘</strong>ಶರವೇಗದಲ್ಲಿ ಬೆಳೆಯುತ್ತಿರುವ ವಿಜ್ಞಾನ ಮತ್ತು ತಂತ್ರಜ್ಞಾನದ ಯುಗದಲ್ಲಿದ್ದೀರಿ. ಇಂತಹ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ, ಕಲ್ಪನೆ, ಆವಿಷ್ಕಾರ, ಸ್ಪರ್ಧೆಗಳಲ್ಲಿ ಕ್ರಿಯಾಶೀಲತೆಯಿಂದ ತೊಡಗಿಕೊಳ್ಳಬೇಕು’ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಸ್.ಜಿ. ಡೊಳ್ಳೇಗೌಡರ ಹೇಳಿದರು.</p>.<p>ನಗರದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸೈನ್ಸ್ ಅಕಾಡೆಮಿ ಮತ್ತು ಬಿ.ಎಸ್ಸಿ ತೃತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನದಲ್ಲಿ ಸಕಾರಾತ್ಮಕ ಚಿಂತನೆಗಳು, ಸಾಧಿಸುವ ಛಲವಿರಬೇಕು. ಅಂದಾಗ ಗುರಿ ಮುಟ್ಟಲು ಸುಲಭವಾಗುತ್ತದೆ’ ಎಂದು ತಿಳಿಸಿದರು.</p>.<p>ಶರಣಬಸವ ವಿವಿ ಡೀನ್ ಲಕ್ಷ್ಮಿ ಪಾಟೀಲ ಮಾಕಾ ಮಾತನಾಡಿ, ‘ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ನಿರಂತರ ಅಭ್ಯಾಸ, ಕಠಿಣ ಶ್ರಮ, ಸ್ಪರ್ಧಾತ್ಮಕ ಮನೋಭಾವನೆ, ಸಮಯಪ್ರಜ್ಞೆ ಬಹಳ ಮುಖ್ಯ. ಜೊತೆಗೆ ಬದುಕಿಗೆ ಬೇಕಾದ ಸಾಮಾಜಿಕ ಮೌಲ್ಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು’ ಎಂದರು.</p>.<p>ಪ್ರಾಚಾರ್ಯ ರಾಮಕೃಷ್ಣ ರೆಡ್ಡಿ ಮಾತನಾಡಿ, ‘ವಿಜ್ಞಾನದ ವಿದ್ಯಾರ್ಥಿಗಳಲ್ಲಿ ಸೃಜನಶೀಲ ಗುಣ, ನಿರಂತರ ಪ್ರಯತ್ನ ಇರಬೇಕು. ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆಯಾಗಬೇಕು’ ಎಂದು ತಿಳಿಸಿದರು.</p>.<p>ಬಸವರಾಜ ಬೀಳಗಿ 2024–25ನೇ ಸಾಲಿನ ಶೈಕ್ಷಣಿಕ ವರದಿ ವಾಚನ ಮಾಡಿದರು. ಕ್ರೀಡೆ, ಎನ್ಎಸ್ಎಸ್, ಎನ್ಸಿಸಿ, ಕೆ–ಸೆಟ್ ಪರೀಕ್ಷೆ, ಸಂಗೀತ, ನೃತ್ಯ, ಚಿತ್ರಕಲೆ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಹಣ, ಪ್ರಶಸ್ತಿ ವಿತರಿಸಲಾಯಿತು.</p>.<p>ಓಂಪ್ರಕಾಶ್, ಪ್ರದೀಪ್ ಉಪಸ್ಥಿತರಿದ್ದರು. ಸಿಂಧು, ವೈಷ್ಣವಿ ನಿರೂಪಿಸಿದರು. ಮಧುರಾ ಪ್ರಾರ್ಥನಾ ಗೀತೆ ಹಾಡಿದರು. ಲತಾದೇವಿ ಕರಿಕಲ್ ಸ್ವಾಗತಿಸಿದರು. ಬಸಮ್ಮ ಅತಿಥಿ ಪರಿಚಯ ಮಾಡಿದರು. ಶೈಲಾ ಹಿರೇಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: ‘</strong>ಶರವೇಗದಲ್ಲಿ ಬೆಳೆಯುತ್ತಿರುವ ವಿಜ್ಞಾನ ಮತ್ತು ತಂತ್ರಜ್ಞಾನದ ಯುಗದಲ್ಲಿದ್ದೀರಿ. ಇಂತಹ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ, ಕಲ್ಪನೆ, ಆವಿಷ್ಕಾರ, ಸ್ಪರ್ಧೆಗಳಲ್ಲಿ ಕ್ರಿಯಾಶೀಲತೆಯಿಂದ ತೊಡಗಿಕೊಳ್ಳಬೇಕು’ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಸ್.ಜಿ. ಡೊಳ್ಳೇಗೌಡರ ಹೇಳಿದರು.</p>.<p>ನಗರದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸೈನ್ಸ್ ಅಕಾಡೆಮಿ ಮತ್ತು ಬಿ.ಎಸ್ಸಿ ತೃತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನದಲ್ಲಿ ಸಕಾರಾತ್ಮಕ ಚಿಂತನೆಗಳು, ಸಾಧಿಸುವ ಛಲವಿರಬೇಕು. ಅಂದಾಗ ಗುರಿ ಮುಟ್ಟಲು ಸುಲಭವಾಗುತ್ತದೆ’ ಎಂದು ತಿಳಿಸಿದರು.</p>.<p>ಶರಣಬಸವ ವಿವಿ ಡೀನ್ ಲಕ್ಷ್ಮಿ ಪಾಟೀಲ ಮಾಕಾ ಮಾತನಾಡಿ, ‘ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ನಿರಂತರ ಅಭ್ಯಾಸ, ಕಠಿಣ ಶ್ರಮ, ಸ್ಪರ್ಧಾತ್ಮಕ ಮನೋಭಾವನೆ, ಸಮಯಪ್ರಜ್ಞೆ ಬಹಳ ಮುಖ್ಯ. ಜೊತೆಗೆ ಬದುಕಿಗೆ ಬೇಕಾದ ಸಾಮಾಜಿಕ ಮೌಲ್ಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು’ ಎಂದರು.</p>.<p>ಪ್ರಾಚಾರ್ಯ ರಾಮಕೃಷ್ಣ ರೆಡ್ಡಿ ಮಾತನಾಡಿ, ‘ವಿಜ್ಞಾನದ ವಿದ್ಯಾರ್ಥಿಗಳಲ್ಲಿ ಸೃಜನಶೀಲ ಗುಣ, ನಿರಂತರ ಪ್ರಯತ್ನ ಇರಬೇಕು. ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆಯಾಗಬೇಕು’ ಎಂದು ತಿಳಿಸಿದರು.</p>.<p>ಬಸವರಾಜ ಬೀಳಗಿ 2024–25ನೇ ಸಾಲಿನ ಶೈಕ್ಷಣಿಕ ವರದಿ ವಾಚನ ಮಾಡಿದರು. ಕ್ರೀಡೆ, ಎನ್ಎಸ್ಎಸ್, ಎನ್ಸಿಸಿ, ಕೆ–ಸೆಟ್ ಪರೀಕ್ಷೆ, ಸಂಗೀತ, ನೃತ್ಯ, ಚಿತ್ರಕಲೆ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಹಣ, ಪ್ರಶಸ್ತಿ ವಿತರಿಸಲಾಯಿತು.</p>.<p>ಓಂಪ್ರಕಾಶ್, ಪ್ರದೀಪ್ ಉಪಸ್ಥಿತರಿದ್ದರು. ಸಿಂಧು, ವೈಷ್ಣವಿ ನಿರೂಪಿಸಿದರು. ಮಧುರಾ ಪ್ರಾರ್ಥನಾ ಗೀತೆ ಹಾಡಿದರು. ಲತಾದೇವಿ ಕರಿಕಲ್ ಸ್ವಾಗತಿಸಿದರು. ಬಸಮ್ಮ ಅತಿಥಿ ಪರಿಚಯ ಮಾಡಿದರು. ಶೈಲಾ ಹಿರೇಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>