ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಕಲಬುರಗಿಯ ಸೂಪರ್ ಮಾರ್ಕೆಟ್ನಲ್ಲಿ ಏಕಾಏಕಿಯಾಗಿ ನೂರಾರು ಅಂಗಡಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದರು. ಇಷ್ಟೊಂದು ಪ್ರಕರಣಗಳನ್ನು ಕಲಬುರಗಿಯಲ್ಲಿ ಮಾತ್ರ ದಾಖಲಿಸಿಕೊಳ್ಳಲಾಗಿದೆ. ಆದರೆ, ಮೇಕೆದಾಟು ಯೋಜನೆಗಾಗಿ ಭಾನುವಾರ ಆರಂಭವಾದ ಪಾದಯಾತ್ರೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದರು. ಅವರಿಗಿಲ್ಲದ ಕೋವಿಡ್ ನಿಯಮಾವಳಿ ವ್ಯಾಪಾರಸ್ಥರಿಗೆ ಮಾತ್ರ ಏಕೆ?’ ಎಂದೂ ಅವರು ಕೇಳಿದ್ದಾರೆ.