<p><strong>ಕಲಬುರಗಿ:</strong> ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಹಿಂದೆ ಜಾತಿ ಲೆಕ್ಕಾಚಾರದ ಹುನ್ನಾರ ಅಡಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಆರೋಪಿಸಿದರು.</p>.<p>‘ಸಮೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆ ಸೇರಿದಂತೆ ಹತ್ತಾರು ಸಮಸ್ಯೆಗಳಿವೆ. ಸಾಕಷ್ಟು ಶಿಕ್ಷಕರಿಗೆ ಸಮರ್ಪಕ ತರಬೇತಿಯನ್ನೂ ಕೊಟ್ಟಿಲ್ಲ. ನಿವೃತ್ತಿ ಅಂಚಿನಲ್ಲಿರುವ, ಅನಾರೋಗ್ಯದಿಂದ ಬಳಲುತ್ತಿರುವವರ ಮೇಲೆ ಒತ್ತಡ ಹೇರಿ ಸಮೀಕ್ಷೆ ಮಾಡಿಸಿ, ಸರ್ಕಾರ ಏನು ಸಾಧಿಸಲು ಹೊರಟಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಶಿಕ್ಷಕರನ್ನು ಶೈಕ್ಷಣಿಕ ಕಾರ್ಯಬಿಟ್ಟು ಬೆರೆಯದ್ದಕ್ಕೆ ಬಳಸದಂತೆ 2025ರ ಜುಲೈ 1ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದರು. ಬಳಿಕ ಆ ಆದೇಶವನ್ನು ಜುಲೈ 24ರಂದು ಪರಿಷ್ಕರಿಸಿ ಚುನಾವಣಾ ಕಾರ್ಯಗಳಿಗೆ ಬಳಸಬಹುದು ಎಂದು ಆದೇಶಿಸಲಾಗಿದೆ. ಅದಾಗ್ಯೂ, ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರ ಬಳಕೆ ಮಾಡಲಾಗಿದೆ. ಸಮೀಕ್ಷೆ ಏನು ಚುನಾವಣಾ ಕಾರ್ಯವೇ?’ ಎಂದು ಪ್ರಶ್ನಿಸಿದರು.</p>.<p>‘ಸಮೀಕ್ಷೆಯಲ್ಲಿನ ಲೋಪಗಳಿಗೆ ಸಂಬಂಧಿಸಿದಂತೆ ಮಾಡಲಾದ ಶಿಕ್ಷಕರ ಅಮಾನತ್ತನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಹಿಂದೆ ಜಾತಿ ಲೆಕ್ಕಾಚಾರದ ಹುನ್ನಾರ ಅಡಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಆರೋಪಿಸಿದರು.</p>.<p>‘ಸಮೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆ ಸೇರಿದಂತೆ ಹತ್ತಾರು ಸಮಸ್ಯೆಗಳಿವೆ. ಸಾಕಷ್ಟು ಶಿಕ್ಷಕರಿಗೆ ಸಮರ್ಪಕ ತರಬೇತಿಯನ್ನೂ ಕೊಟ್ಟಿಲ್ಲ. ನಿವೃತ್ತಿ ಅಂಚಿನಲ್ಲಿರುವ, ಅನಾರೋಗ್ಯದಿಂದ ಬಳಲುತ್ತಿರುವವರ ಮೇಲೆ ಒತ್ತಡ ಹೇರಿ ಸಮೀಕ್ಷೆ ಮಾಡಿಸಿ, ಸರ್ಕಾರ ಏನು ಸಾಧಿಸಲು ಹೊರಟಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಶಿಕ್ಷಕರನ್ನು ಶೈಕ್ಷಣಿಕ ಕಾರ್ಯಬಿಟ್ಟು ಬೆರೆಯದ್ದಕ್ಕೆ ಬಳಸದಂತೆ 2025ರ ಜುಲೈ 1ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದರು. ಬಳಿಕ ಆ ಆದೇಶವನ್ನು ಜುಲೈ 24ರಂದು ಪರಿಷ್ಕರಿಸಿ ಚುನಾವಣಾ ಕಾರ್ಯಗಳಿಗೆ ಬಳಸಬಹುದು ಎಂದು ಆದೇಶಿಸಲಾಗಿದೆ. ಅದಾಗ್ಯೂ, ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರ ಬಳಕೆ ಮಾಡಲಾಗಿದೆ. ಸಮೀಕ್ಷೆ ಏನು ಚುನಾವಣಾ ಕಾರ್ಯವೇ?’ ಎಂದು ಪ್ರಶ್ನಿಸಿದರು.</p>.<p>‘ಸಮೀಕ್ಷೆಯಲ್ಲಿನ ಲೋಪಗಳಿಗೆ ಸಂಬಂಧಿಸಿದಂತೆ ಮಾಡಲಾದ ಶಿಕ್ಷಕರ ಅಮಾನತ್ತನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>