<p><strong>ಅಫಜಲಪುರ:</strong> ‘ದೇವರ ಹತ್ತಿರ ಭಕ್ತರು ಯಾವುದೇ ಸುಖ, ಸೌಭಾಗ್ಯ ಬೇಡುವ ಬದಲು ನನ್ನ ಕೈಯಿಂದ ಇನ್ನೊಬ್ಬರಿಗೆ ಕೆಡುಕು ಮಾಡದೆ ಇರುವಂತವನಾಗಿ ಮಾಡು ಎಂದು ಕೇಳಿಕೊಳ್ಳಬೇಕು. ಅಂದಾಗ ದೇವರು ತಮಗೆ ಎಲ್ಲವನ್ನು ಕರುಣಿಸುತ್ತಾನೆ’ ಎಂದು ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಬುಧವಾರ ತಿಳಿಸಿದರು.</p>.<p>ತಾಲ್ಲೂಕಿನ ಶಿರವಾಳ ಗ್ರಾಮದಲ್ಲಿ ವೀರ ಸಂಗಮೇಶ್ವರ ಜಾತ್ರಾ ಮಹೋತ್ಸವದ ಧರ್ಮ ಸಭೆಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಪುರಾಣ, ಪ್ರವಚನಗಳು, ಶಾಸ್ತ್ರಗಳು ನಮ್ಮ ಜೀವನಕ್ಕೆ ದಾರಿ ದೀಪವಾಗಿವೆ. ದೇವರ ಮೇಲೆ ನಿಶ್ಚಲವಾದ ಭಕ್ತಿಯಿಂದ ಪ್ರಾರ್ಥಿಸಿದಾಗ ಯಶಸ್ಸು ಕಾಣಲು ಸಾಧ್ಯ. ನಾವೆಲ್ಲರೂ ಪುಣ್ಯದ ಕಾರ್ಯಗಳಲ್ಲಿ ತೊಡಗಿ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದರು.</p>.<p>‘ಮಳೇಂದ್ರ ಮಠ ಮತ್ತು ವೀರ ಸಂಗಮೇಶ್ವರ ಮಠ ಇವೆರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಶಿರವಾಳ ಮಠದ ಪ್ರತಿಯೊಂದ ಕಾರ್ಯಕ್ಕೆ ಬೆನ್ನೆಲುಬಾಗಿ ನಿಲ್ಲತ್ತೇನೆ’ ಎಂದು ತಿಳಿಸಿದರು.</p>.<p>ಚಿನ್ಮಯಗಿರಿಯ ವೀರ ಮಹಾಂತ ಶಿವಾಚಾರ್ಯರು ಮಾತನಾಡಿ, ‘ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆತು ಅವರ ಬಾಳು ಬಂಗಾರವಾಗಲಿ ಮತ್ತು ದೇಶದ ಗಡಿಯನ್ನು ಕಾಯುತ್ತಿರುವ ಯೋಧರಿಗೆ ಯಾವುದೇ ಕಷ್ಟ ಬಾರದಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ’ ಎಂದು ತಿಳಿಸಿದರು.</p>.<p>ಜೇವರ್ಗಿಯ ಗುರುಶಾಂತಲಿಂಗರಾಧ್ಯ ಶಿವಾಚಾರ್ಯರು, ಗೌರ (ಬಿ) ಯ ಕೈಲಾಸಲಿಂಗ ಶಿವಾಚಾರ್ಯರು, ಕಾಶಿಲಿಂಗ ಜೇವೂರಿನ ಪಾಂಡುರಂಗ ಮಹಾರಾಜರು, ಮಲ್ಲಯ್ಯ ಹಿರೇಮಠ, ಮಡಿವಾಳಯ್ಯ ಶಾಸ್ತ್ರಿಗಳು, ಶಂಕರಯ್ಯ ಹಿರೇಮಠ, ಧಾನಯ್ಯ ಹಿರೇಮಠ, ಶರಣಯ್ಯ ಹಿರೇಮಠ, ಸಿದ್ದಯ್ಯ ಹಿರೇಮಠ, ನಿಂಗಯ್ಯ ಹಿರೇಮಠ ಹಾಗೂ ಗ್ರಾಮಸ್ಥರು ಇದ್ದರು.</p>.<p>ಜಾತ್ರೆ ಪ್ರಯುಕ್ತ ಹಮ್ಮಿಕೊಂಡ ಸಾಲೋಟಗಿಯ ಶಿವಯೋಗೇಶ್ವರರ ಪುರಾಣ ಮಂಗಲಗೊಂಡಿತು. ರಾಯಚೂರಿನ ಹಗಲುವೇಷ, ಕಮಲನಗರದ ಕೋಲಾಟ ತಂಡ, ಬೀದರ್ನ ಗೊಂಬೆ ಮುಖವಾಡ ತಂಡ, ಡೊಳ್ಳು ಕುಣಿತ ತಂಡಗಳಿಂದ ಮನರಂಜನೆ ಕಾರ್ಯಕ್ರಮ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ‘ದೇವರ ಹತ್ತಿರ ಭಕ್ತರು ಯಾವುದೇ ಸುಖ, ಸೌಭಾಗ್ಯ ಬೇಡುವ ಬದಲು ನನ್ನ ಕೈಯಿಂದ ಇನ್ನೊಬ್ಬರಿಗೆ ಕೆಡುಕು ಮಾಡದೆ ಇರುವಂತವನಾಗಿ ಮಾಡು ಎಂದು ಕೇಳಿಕೊಳ್ಳಬೇಕು. ಅಂದಾಗ ದೇವರು ತಮಗೆ ಎಲ್ಲವನ್ನು ಕರುಣಿಸುತ್ತಾನೆ’ ಎಂದು ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಬುಧವಾರ ತಿಳಿಸಿದರು.</p>.<p>ತಾಲ್ಲೂಕಿನ ಶಿರವಾಳ ಗ್ರಾಮದಲ್ಲಿ ವೀರ ಸಂಗಮೇಶ್ವರ ಜಾತ್ರಾ ಮಹೋತ್ಸವದ ಧರ್ಮ ಸಭೆಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಪುರಾಣ, ಪ್ರವಚನಗಳು, ಶಾಸ್ತ್ರಗಳು ನಮ್ಮ ಜೀವನಕ್ಕೆ ದಾರಿ ದೀಪವಾಗಿವೆ. ದೇವರ ಮೇಲೆ ನಿಶ್ಚಲವಾದ ಭಕ್ತಿಯಿಂದ ಪ್ರಾರ್ಥಿಸಿದಾಗ ಯಶಸ್ಸು ಕಾಣಲು ಸಾಧ್ಯ. ನಾವೆಲ್ಲರೂ ಪುಣ್ಯದ ಕಾರ್ಯಗಳಲ್ಲಿ ತೊಡಗಿ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದರು.</p>.<p>‘ಮಳೇಂದ್ರ ಮಠ ಮತ್ತು ವೀರ ಸಂಗಮೇಶ್ವರ ಮಠ ಇವೆರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಶಿರವಾಳ ಮಠದ ಪ್ರತಿಯೊಂದ ಕಾರ್ಯಕ್ಕೆ ಬೆನ್ನೆಲುಬಾಗಿ ನಿಲ್ಲತ್ತೇನೆ’ ಎಂದು ತಿಳಿಸಿದರು.</p>.<p>ಚಿನ್ಮಯಗಿರಿಯ ವೀರ ಮಹಾಂತ ಶಿವಾಚಾರ್ಯರು ಮಾತನಾಡಿ, ‘ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆತು ಅವರ ಬಾಳು ಬಂಗಾರವಾಗಲಿ ಮತ್ತು ದೇಶದ ಗಡಿಯನ್ನು ಕಾಯುತ್ತಿರುವ ಯೋಧರಿಗೆ ಯಾವುದೇ ಕಷ್ಟ ಬಾರದಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ’ ಎಂದು ತಿಳಿಸಿದರು.</p>.<p>ಜೇವರ್ಗಿಯ ಗುರುಶಾಂತಲಿಂಗರಾಧ್ಯ ಶಿವಾಚಾರ್ಯರು, ಗೌರ (ಬಿ) ಯ ಕೈಲಾಸಲಿಂಗ ಶಿವಾಚಾರ್ಯರು, ಕಾಶಿಲಿಂಗ ಜೇವೂರಿನ ಪಾಂಡುರಂಗ ಮಹಾರಾಜರು, ಮಲ್ಲಯ್ಯ ಹಿರೇಮಠ, ಮಡಿವಾಳಯ್ಯ ಶಾಸ್ತ್ರಿಗಳು, ಶಂಕರಯ್ಯ ಹಿರೇಮಠ, ಧಾನಯ್ಯ ಹಿರೇಮಠ, ಶರಣಯ್ಯ ಹಿರೇಮಠ, ಸಿದ್ದಯ್ಯ ಹಿರೇಮಠ, ನಿಂಗಯ್ಯ ಹಿರೇಮಠ ಹಾಗೂ ಗ್ರಾಮಸ್ಥರು ಇದ್ದರು.</p>.<p>ಜಾತ್ರೆ ಪ್ರಯುಕ್ತ ಹಮ್ಮಿಕೊಂಡ ಸಾಲೋಟಗಿಯ ಶಿವಯೋಗೇಶ್ವರರ ಪುರಾಣ ಮಂಗಲಗೊಂಡಿತು. ರಾಯಚೂರಿನ ಹಗಲುವೇಷ, ಕಮಲನಗರದ ಕೋಲಾಟ ತಂಡ, ಬೀದರ್ನ ಗೊಂಬೆ ಮುಖವಾಡ ತಂಡ, ಡೊಳ್ಳು ಕುಣಿತ ತಂಡಗಳಿಂದ ಮನರಂಜನೆ ಕಾರ್ಯಕ್ರಮ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>