<p><strong>ವಾಡಿ (ಕಲಬುರಗಿ ಜಿಲ್ಲೆ):</strong> ಶಿವಾಜಿ ಜಯಂತಿಯಂದು ಮೈಕ್ ಶಬ್ದಕ್ಕೆ ಸಂಬಂಧಿಸಿ ಗುರುವಾರ ರಾತ್ರಿ ರಾವೂರು ಗ್ರಾಮದಲ್ಲಿ ಹಿಂದೂ–ಮುಸ್ಲಿಂ ಗುಂಪುಗಳ ನಡುವೆ ಚಕಮಕಿ ಉಂಟಾಗಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಕಲ್ಲುತೂರಾಟ ನಡೆದು 5ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಶನಿವಾರ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ರಾವೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರೊಂದಿಗೆ ಚರ್ಚಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>ಗ್ರಾಮದ ಗೋಕುಲ ನಗರದ ಗಣೇಶ ಕಟ್ಟೆಯ ಬಳಿ ಗುರುವಾರ ರಾತ್ರಿ ಶಿವಾಜಿ ಜಯಂತಿಯಂದು ನಡೆಯುತ್ತಿದ್ದ ಮೆರವಣಿಗೆಯಲ್ಲಿ ಮೈಕ್ ಶಬ್ದ ಕಡಿಮೆ ಮಾಡುವ ವಿಷಯಕ್ಕೆ ಕೆಲ ಮುಸ್ಲಿಂ ಹಾಗೂ ಹಿಂದೂ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು ನೂಕಾಟ–ತಳ್ಳಾಟ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.</p>.<p>ಘಟನೆಯಲ್ಲಿ 5 ಜನರು ಗಾಯಗೊಂಡರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ವಾಡಿ ಪಿಎಸ್ಐ ತಿರುಮಲೇಶ ಕೆ. ಪರಿಸ್ಥಿತಿ ತಿಳಿಗೊಳಿಸಿದರು. ಈ ಕುರಿತು ವಾಡಿ ಠಾಣೆಯಲ್ಲಿ ಮುಂಜಾಗ್ರತೆಯಾಗಿ ಎರಡು ಕೋಮಿನ 8 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗ್ರಾಮದಲ್ಲಿ ಈಗ ಹೆಚ್ಚಿನ ಪೊಲೀಸರು ಬೀಡು ಬಿಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ (ಕಲಬುರಗಿ ಜಿಲ್ಲೆ):</strong> ಶಿವಾಜಿ ಜಯಂತಿಯಂದು ಮೈಕ್ ಶಬ್ದಕ್ಕೆ ಸಂಬಂಧಿಸಿ ಗುರುವಾರ ರಾತ್ರಿ ರಾವೂರು ಗ್ರಾಮದಲ್ಲಿ ಹಿಂದೂ–ಮುಸ್ಲಿಂ ಗುಂಪುಗಳ ನಡುವೆ ಚಕಮಕಿ ಉಂಟಾಗಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಕಲ್ಲುತೂರಾಟ ನಡೆದು 5ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಶನಿವಾರ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ರಾವೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರೊಂದಿಗೆ ಚರ್ಚಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>ಗ್ರಾಮದ ಗೋಕುಲ ನಗರದ ಗಣೇಶ ಕಟ್ಟೆಯ ಬಳಿ ಗುರುವಾರ ರಾತ್ರಿ ಶಿವಾಜಿ ಜಯಂತಿಯಂದು ನಡೆಯುತ್ತಿದ್ದ ಮೆರವಣಿಗೆಯಲ್ಲಿ ಮೈಕ್ ಶಬ್ದ ಕಡಿಮೆ ಮಾಡುವ ವಿಷಯಕ್ಕೆ ಕೆಲ ಮುಸ್ಲಿಂ ಹಾಗೂ ಹಿಂದೂ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು ನೂಕಾಟ–ತಳ್ಳಾಟ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.</p>.<p>ಘಟನೆಯಲ್ಲಿ 5 ಜನರು ಗಾಯಗೊಂಡರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ವಾಡಿ ಪಿಎಸ್ಐ ತಿರುಮಲೇಶ ಕೆ. ಪರಿಸ್ಥಿತಿ ತಿಳಿಗೊಳಿಸಿದರು. ಈ ಕುರಿತು ವಾಡಿ ಠಾಣೆಯಲ್ಲಿ ಮುಂಜಾಗ್ರತೆಯಾಗಿ ಎರಡು ಕೋಮಿನ 8 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗ್ರಾಮದಲ್ಲಿ ಈಗ ಹೆಚ್ಚಿನ ಪೊಲೀಸರು ಬೀಡು ಬಿಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>