ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಹಡಗಿಗೆ ರಂಧ್ರ ಕೊರೆಯುತ್ತಿರುವ ಸಿದ್ದರಾಮಯ್ಯ: ಸಚಿವ ಎಸ್‌.ಟಿ. ಸೋಮಶೇಖರ್‌

Last Updated 11 ಏಪ್ರಿಲ್ 2021, 9:05 IST
ಅಕ್ಷರ ಗಾತ್ರ

ಕಲಬುರ್ಗಿ: ‘ಕಾಂಗ್ರೆಸ್‌ ಈಗ ಮುಳುಗುತ್ತಿರುವ ಹಡಗು. ಸಿದ್ದರಾಮಯ್ಯ ಅವರು ಇದಕ್ಕೆ ಇನ್ನೆರಡು ರಂಧ್ರ ಮಾಡಿದರೆ ಸಾಕು ಅದು ಪೂರ್ತಿ ಮುಳುಗುತ್ತದೆ. ಇಂಥ ಮುಳುಗುವ ಹಡಗಿಗೆ ಡಿ.ಕೆ. ಶಿವಕುಮಾರ್‌ ಅವರನ್ನು ಡ್ರೈವರ್‌ ಮಾಡಿದ್ದಾರೆ’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಮೂದಲಿಸಿದರು.

‘ನಾಯಕರಾದ ಸಿದ್ದರಾಮಯ್ಯ ಒಂದು ಕಡೆಯಿಂದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ. ಪರಮೇಶ್ವರ, ರಮೇಶಕುಮಾರ್ ಇನ್ನೊಂದು ಕಡೆಯಿಂದ ರಂಧ್ರ ಮಾಡುತ್ತಿದ್ದಾರೆ. ಈ ಹಡಗು ಪೂರ್ತಿ ಮುಳುಗಿದ ಮೇಲೆ ಸಿದ್ದರಾಮಯ್ಯ ಅವರು ಅತ್ಯಂತ ಖುಷಿ ಪಡುವ ವ್ಯಕ್ತಿ’ ಎಂದೂ ಅವರು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಲೇವಡಿ ಮಾಡಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಕ್ಷ ಅಥವಾ ಸರ್ಕಾರದಲ್ಲಿ ನಮ್ಮ ಸಹೋದ್ಯೊಗಿ ಆದವರು ಅದರ ಚೌಕಟ್ಟಿನೊಳಗೇ ಮಾತನಾಡಬೇಕು. ಚೌಕಟ್ಟು ಮೀರಿದವರ ಮೇಲೆ ಕ್ರಮ ಕೈಗೊಳ್ಳುವುದಕ್ಕೆ ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ರಾಜಕೀಯ ಕಾರ್ಯದರ್ಶಿಗಳು ಇದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT