ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಕ್ಷ ಅಥವಾ ಸರ್ಕಾರದಲ್ಲಿ ನಮ್ಮ ಸಹೋದ್ಯೊಗಿ ಆದವರು ಅದರ ಚೌಕಟ್ಟಿನೊಳಗೇ ಮಾತನಾಡಬೇಕು. ಚೌಕಟ್ಟು ಮೀರಿದವರ ಮೇಲೆ ಕ್ರಮ ಕೈಗೊಳ್ಳುವುದಕ್ಕೆ ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ರಾಜಕೀಯ ಕಾರ್ಯದರ್ಶಿಗಳು ಇದ್ದಾರೆ’ ಎಂದರು.