<p><strong>ಕಲಬುರಗಿ</strong>: ‘ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕಿಂತ ಉನ್ನತ ಗುರಿ ಇಟ್ಟುಕೊಳ್ಳಬೇಕು. ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಭಾರತದ ನಾಗರಿಕರಾಗಿ ಮೂಲಭೂತ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಬೇಕು’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಹೇಳಿದರು.</p>.<p>ನಗರದ ಎಂಜಿನಿಯರ್ಸ್ ಸಂಸ್ಥೆಯ ವಿಶ್ವೇಶ್ವರಯ್ಯ ಭವನದಲ್ಲಿ ಈಚೆಗೆ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಪ್ರತಿಷ್ಠಾನ, ಸರ್ವಜ್ಞ ಮತ್ತು ಜಸ್ಟೀಸ್ ಶಿವರಾಜ ಪಾಟೀಲ ಪದವಿ ಪೂರ್ವ ಕಾಲೇಜು ಕಲಬುರಗಿ ಹಾಗೂ ರಾಯಚೂರು ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರು ಉತ್ತಮ ಸಾಧನೆ ಮಾಡಿ ದೇಶದಲ್ಲಿ ಪ್ರಜ್ಞಾವಂತ ನಾಗರಿಕರಾಗಿ ಬೆಳೆಯುತ್ತಾರೆ. ಮಕ್ಕಳಿಗೆ ತಾಯಿಯ ಮಡಿಲು, ಅಪ್ಪನ ಹೆಗಲು, ಶಿಕ್ಷಕನ ಮಾರ್ಗದರ್ಶನ ಶ್ರೇಷ್ಠವಾಗಿದೆ’ ಎಂದರು.</p>.<p>‘ಬಡವರಿಗೆ, ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವಾಗ, ದಾನ ಮಾಡುವಾಗ, ದಾಸೋಹ ಮಾಡುವಾಗ ಕೊಡುವ ಕೈ ಮುಂದಾಗಬೇಕು, ತಲೆಬಾಗಬೇಕು. ಭಗವಂತ ಕೊಡುವ ಸಾಮರ್ಥ್ಯ ಕೊಟ್ಟಿದ್ದಾನೆ ಎಂಬ ವಿನಯ ಭಾವನೆ ಇರಬೇಕು’ ಎಂದು ಹೇಳಿದರು.</p>.<p>ಹೈಕೋರ್ಟ್ ನ್ಯಾಯಮೂರ್ತಿ ಟಿ.ಎನ್. ಇನವಳ್ಳಿ ಮಾತನಾಡಿ, ‘ಸೌಜನ್ಯ, ಸೌಮ್ಯತೆ, ವಿನಮ್ರತೆ ಇದ್ದರೆ ಯಾವ ಮಟ್ಟಕ್ಕೆ ಏರಬಹುದು ಎಂಬುದಕ್ಕೆ ನ್ಯಾ. ಶಿವರಾಜ ಪಾಟೀಲ ಅವರೇ ನಮಗೆಲ್ಲ ಮಾದರಿಯಾಗಿದ್ದಾರೆ’ ಎಂದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ‘ನ್ಯಾ. ಶಿವರಾಜ ಪಾಟೀಲ ಅವರ ಸಮಾಜದ ಬಗೆಗಿನ ಕಳಕಳಿಯ ಒಂದಂಶವಾದರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಇಳಕಲ್ನ ಗುರುಮಹಾಂತ ಸ್ವಾಮೀಜಿ, ನಾಲವಾರದ ಸಿದ್ಧತೋಟೇಂದ್ರ ಶಿವಾಚಾರ್ಯರು, ಚಿಂತಕ ರಂಜಾನ್ ದರ್ಗಾ ಮಾತನಾಡಿದರು.</p>.<p>ದ್ವಿತೀಯ ಪಿಯುಸಿ ಪರೀಕ್ಷೆ, ಜೆಇಇ, ನೀಟ್, ಸಿಇಟಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಬಡಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹25,000 ವಿದ್ಯಾರ್ಥಿವೇತನ, ₹11,000 ಪ್ರೋತ್ಸಾಹಧನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಕರ್ನಾಟಕ ಇತಿಹಾಸ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಕೆ.ಎಲ್. ರಾಜಶೇಖರ, ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಅಧ್ಯಕ್ಷ ಎನ್.ಶರಣಪ್ಪ, ಸರ್ವಜ್ಞ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಗೀತಾ ಚನ್ನಾರಡ್ಡಿ ಪಾಟೀಲ, ಸಂಸ್ಥೆಯ ಮುಖ್ಯ ಶೈಕ್ಷಣಿಕ ನಿರ್ದೇಶಕ ಅಭಿಷೇಕ್ ಚನ್ನಾರಡ್ಡಿ ಪಾಟೀಲ, ರಾಕೇಶ್ ಚನ್ನಾರಡ್ಡಿ ಪಾಟೀಲ, ಪ್ರಾಚಾರ್ಯ ಪ್ರಶಾಂತ್ ಕುಲಕರ್ಣಿ, ವಿನುತಾ ಆರ್.ಬಿ., ಕರುಣೇಶ್ ಹಿರೇಮಠ, ಗುರುರಾಜ ಕುಲಕರ್ಣಿ ಉಪಸ್ಥಿತರಿದ್ದರು. ವಿದ್ಯಾವತಿ ಪಾಟೀಲ ನಿರೂಪಿಸಿದರು. ತ್ರಿವೇಣಿ ಭಾವಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕಿಂತ ಉನ್ನತ ಗುರಿ ಇಟ್ಟುಕೊಳ್ಳಬೇಕು. ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಭಾರತದ ನಾಗರಿಕರಾಗಿ ಮೂಲಭೂತ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಬೇಕು’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಹೇಳಿದರು.</p>.<p>ನಗರದ ಎಂಜಿನಿಯರ್ಸ್ ಸಂಸ್ಥೆಯ ವಿಶ್ವೇಶ್ವರಯ್ಯ ಭವನದಲ್ಲಿ ಈಚೆಗೆ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಪ್ರತಿಷ್ಠಾನ, ಸರ್ವಜ್ಞ ಮತ್ತು ಜಸ್ಟೀಸ್ ಶಿವರಾಜ ಪಾಟೀಲ ಪದವಿ ಪೂರ್ವ ಕಾಲೇಜು ಕಲಬುರಗಿ ಹಾಗೂ ರಾಯಚೂರು ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರು ಉತ್ತಮ ಸಾಧನೆ ಮಾಡಿ ದೇಶದಲ್ಲಿ ಪ್ರಜ್ಞಾವಂತ ನಾಗರಿಕರಾಗಿ ಬೆಳೆಯುತ್ತಾರೆ. ಮಕ್ಕಳಿಗೆ ತಾಯಿಯ ಮಡಿಲು, ಅಪ್ಪನ ಹೆಗಲು, ಶಿಕ್ಷಕನ ಮಾರ್ಗದರ್ಶನ ಶ್ರೇಷ್ಠವಾಗಿದೆ’ ಎಂದರು.</p>.<p>‘ಬಡವರಿಗೆ, ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವಾಗ, ದಾನ ಮಾಡುವಾಗ, ದಾಸೋಹ ಮಾಡುವಾಗ ಕೊಡುವ ಕೈ ಮುಂದಾಗಬೇಕು, ತಲೆಬಾಗಬೇಕು. ಭಗವಂತ ಕೊಡುವ ಸಾಮರ್ಥ್ಯ ಕೊಟ್ಟಿದ್ದಾನೆ ಎಂಬ ವಿನಯ ಭಾವನೆ ಇರಬೇಕು’ ಎಂದು ಹೇಳಿದರು.</p>.<p>ಹೈಕೋರ್ಟ್ ನ್ಯಾಯಮೂರ್ತಿ ಟಿ.ಎನ್. ಇನವಳ್ಳಿ ಮಾತನಾಡಿ, ‘ಸೌಜನ್ಯ, ಸೌಮ್ಯತೆ, ವಿನಮ್ರತೆ ಇದ್ದರೆ ಯಾವ ಮಟ್ಟಕ್ಕೆ ಏರಬಹುದು ಎಂಬುದಕ್ಕೆ ನ್ಯಾ. ಶಿವರಾಜ ಪಾಟೀಲ ಅವರೇ ನಮಗೆಲ್ಲ ಮಾದರಿಯಾಗಿದ್ದಾರೆ’ ಎಂದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ‘ನ್ಯಾ. ಶಿವರಾಜ ಪಾಟೀಲ ಅವರ ಸಮಾಜದ ಬಗೆಗಿನ ಕಳಕಳಿಯ ಒಂದಂಶವಾದರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಇಳಕಲ್ನ ಗುರುಮಹಾಂತ ಸ್ವಾಮೀಜಿ, ನಾಲವಾರದ ಸಿದ್ಧತೋಟೇಂದ್ರ ಶಿವಾಚಾರ್ಯರು, ಚಿಂತಕ ರಂಜಾನ್ ದರ್ಗಾ ಮಾತನಾಡಿದರು.</p>.<p>ದ್ವಿತೀಯ ಪಿಯುಸಿ ಪರೀಕ್ಷೆ, ಜೆಇಇ, ನೀಟ್, ಸಿಇಟಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಬಡಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹25,000 ವಿದ್ಯಾರ್ಥಿವೇತನ, ₹11,000 ಪ್ರೋತ್ಸಾಹಧನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಕರ್ನಾಟಕ ಇತಿಹಾಸ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಕೆ.ಎಲ್. ರಾಜಶೇಖರ, ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಅಧ್ಯಕ್ಷ ಎನ್.ಶರಣಪ್ಪ, ಸರ್ವಜ್ಞ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಗೀತಾ ಚನ್ನಾರಡ್ಡಿ ಪಾಟೀಲ, ಸಂಸ್ಥೆಯ ಮುಖ್ಯ ಶೈಕ್ಷಣಿಕ ನಿರ್ದೇಶಕ ಅಭಿಷೇಕ್ ಚನ್ನಾರಡ್ಡಿ ಪಾಟೀಲ, ರಾಕೇಶ್ ಚನ್ನಾರಡ್ಡಿ ಪಾಟೀಲ, ಪ್ರಾಚಾರ್ಯ ಪ್ರಶಾಂತ್ ಕುಲಕರ್ಣಿ, ವಿನುತಾ ಆರ್.ಬಿ., ಕರುಣೇಶ್ ಹಿರೇಮಠ, ಗುರುರಾಜ ಕುಲಕರ್ಣಿ ಉಪಸ್ಥಿತರಿದ್ದರು. ವಿದ್ಯಾವತಿ ಪಾಟೀಲ ನಿರೂಪಿಸಿದರು. ತ್ರಿವೇಣಿ ಭಾವಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>