ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಚಂದ್ರಶೇಖರ ಎಸ್.ಹಿರೇಮಠ, ಶಿವಕುಮಾರ ರೇಷ್ಮಿ, ಕಲ್ಯಾಣಕರ ಎಂ.ಪಿ., ‘ಈ ಘಟನೆಯು ರಾಜ್ಯ ಸರ್ಕಾರದ ಘನತೆಗೆ ಕಳಂಕ ತಂದಿದೆ. ಹೀಗಾಗಿ ಸರ್ಕಾರವು ಆ ಶಾಲೆಯ ಶಿಕ್ಷಕರು, ಸಿಬ್ಬಂದಿಯನ್ನು ಬರೀ ಅಮಾನತುಗೊಳಿಸಿದರೆ ಸಾಲದು. ಅವರನ್ನು ಸೇವೆಯಿಂದಲೇ ವಜಾಗೊಳಿಸುವ ಮೂಲಕ ಇಂಥ ಅಮಾನವೀಯ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಗಟ್ಟಿ ಸಂದೇಶ ರವಾನಿಸಬೇಕು’ ಎಂದು ಒತ್ತಾಯಿಸಿದ್ದಾರೆ.