<p><strong>ಕಲಬುರ್ಗಿ: </strong>ಮಲ್ಲಿಕಾರ್ಜುನ ದೇವಾಲಯಲ್ಲಿ ಈ ವರ್ಷ ಶ್ರಾವಣ ಮಾಸದ ಅಂಗವಾಗಿ ಪುರಾಣ ಪ್ರವಚನ ಕಾರ್ಯಕ್ರಮಗಳನ್ನು ರದ್ದು ಪಡಿಸಲು ನಿರ್ಧರಿಸಲಾಗಿದೆ ಎಂದು ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ತಿಳಿಸಿದ್ದಾರೆ.</p>.<p>ಕಾಲೊನಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್ ತಡೆಗಟ್ಟುವ ಏಕೈಕ ಮಾರ್ಗವೆಂದರೆ ಮುಂಜಾಗ್ರತೆಯ ಮದ್ದು ಎಂಬಂತೆ ಗುಡಿ, ಗುಂಡಾರಗಳಲ್ಲಿ ಸಭೆ, ಸಮಾರಂಭ ಮಾಡಬಾರದು ಎಂಬ ಸರ್ಕಾರದ ಆದೇಶದ ಪ್ರಯುಕ್ತ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<p>ಸೊಸೈಟಿ ಅಧ್ಯಕ್ಷ ಮಲ್ಲಿನಾಥ ದೇಶಮುಖ ಸಭೆಯ ಅಧ್ಯಕ್ಷತೆ ವಹಿಸಿ ದ್ದರು, ಉಪಾಧ್ಯಕ್ಷ ಉಮೇಶ ಶಟ್ಟಿ ಸ್ವಾಗತಿಸಿದರು, ಕಾರ್ಯದರ್ಶಿ ಶಿವರಾಜ ಅಂಡಗಿ ಸೊಸೈಟಿಯ ಜಮಾ–ಖರ್ಚಿನ ಲೆಕ್ಕಪತ್ರದ ಬಜೆಟ್ ಮಂಡಿಸಿದರು.</p>.<p>ಅಣವೀರಪ್ಪ ಮುಗಳಿ, ಬಸವಂ ತರಾವ ಜಾಬಶೆಟ್ಟಿ , ಮಲ್ಲಿಕಾರ್ಜುನ ನಾಗಶೆಟ್ಟಿ , ಶಾಂತಯ್ಯ ಬೀದಿಮನಿ, ಗುರುಲಿಂಗಯ್ಯ ಮಠಪತಿ, ಸುಭಾಷ್ ಮಂಠಾಳೆ, ಕಾಶಿನಾಥ ಚಿನ್ಮಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಮಲ್ಲಿಕಾರ್ಜುನ ದೇವಾಲಯಲ್ಲಿ ಈ ವರ್ಷ ಶ್ರಾವಣ ಮಾಸದ ಅಂಗವಾಗಿ ಪುರಾಣ ಪ್ರವಚನ ಕಾರ್ಯಕ್ರಮಗಳನ್ನು ರದ್ದು ಪಡಿಸಲು ನಿರ್ಧರಿಸಲಾಗಿದೆ ಎಂದು ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ತಿಳಿಸಿದ್ದಾರೆ.</p>.<p>ಕಾಲೊನಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್ ತಡೆಗಟ್ಟುವ ಏಕೈಕ ಮಾರ್ಗವೆಂದರೆ ಮುಂಜಾಗ್ರತೆಯ ಮದ್ದು ಎಂಬಂತೆ ಗುಡಿ, ಗುಂಡಾರಗಳಲ್ಲಿ ಸಭೆ, ಸಮಾರಂಭ ಮಾಡಬಾರದು ಎಂಬ ಸರ್ಕಾರದ ಆದೇಶದ ಪ್ರಯುಕ್ತ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<p>ಸೊಸೈಟಿ ಅಧ್ಯಕ್ಷ ಮಲ್ಲಿನಾಥ ದೇಶಮುಖ ಸಭೆಯ ಅಧ್ಯಕ್ಷತೆ ವಹಿಸಿ ದ್ದರು, ಉಪಾಧ್ಯಕ್ಷ ಉಮೇಶ ಶಟ್ಟಿ ಸ್ವಾಗತಿಸಿದರು, ಕಾರ್ಯದರ್ಶಿ ಶಿವರಾಜ ಅಂಡಗಿ ಸೊಸೈಟಿಯ ಜಮಾ–ಖರ್ಚಿನ ಲೆಕ್ಕಪತ್ರದ ಬಜೆಟ್ ಮಂಡಿಸಿದರು.</p>.<p>ಅಣವೀರಪ್ಪ ಮುಗಳಿ, ಬಸವಂ ತರಾವ ಜಾಬಶೆಟ್ಟಿ , ಮಲ್ಲಿಕಾರ್ಜುನ ನಾಗಶೆಟ್ಟಿ , ಶಾಂತಯ್ಯ ಬೀದಿಮನಿ, ಗುರುಲಿಂಗಯ್ಯ ಮಠಪತಿ, ಸುಭಾಷ್ ಮಂಠಾಳೆ, ಕಾಶಿನಾಥ ಚಿನ್ಮಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>