<p><strong>ಕಲಬುರಗಿ:</strong> ಪವಿತ್ರ ಶ್ರಾವಣ ಮಾಸದ ಮೂರನೇ ಸೋಮವಾರದ ಅಂಗವಾಗಿ ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬಂತು.</p><p>ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ ನಡೆಯಿತು. ಉಭಯ ಶರಣರ ಗದ್ದುಗೆಗೆ ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.</p><p>ಜಿಲ್ಲೆ ಮಾತ್ರವಲ್ಲದೆ ನೆರೆಯ ಬೀದರ್, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಭಕ್ತರು ಬಂದು ಶರಣಬಸವೇಶ್ವರರ ದರ್ಶನ ಪಡೆದರು.</p><p>ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು, ಕಾಯಿ, ಕರ್ಪೂರ, ಬಿಲ್ವಪತ್ರೆ ಅರ್ಪಿಸಿ ಭಕ್ತಿಮೆರೆದರು.</p><p>ಶರಣ ಬಸವೇಶ್ವರರ ದರ್ಶನಕ್ಕೆ ಅನುಕೂಲ ಕಲ್ಪಿಸಲು ದೇವಸ್ಥಾನದಲ್ಲಿ ನಾಲ್ಕು ಸಾಲುಗಳ ವ್ಯವಸ್ಥೆ ಮಾಡಲಾಗಿತ್ತು. ಒಂದು ಗಣ್ಯರ ಸಾಲು, ಎರಡು ಗರ್ಭಗುಡಿ ಎದುರು ಪ್ರವೇಶ ಕಲ್ಪಿಸುವ ಸಾಲು ಹಾಗೂ ಮತ್ತೊಂದು ದೇವಸ್ಥಾನದ ಹೊರಗಿನಿಂದಲೇ ಕೈಮುಗಿದು ಭಕ್ತಿ ಅರ್ಪಿಸಲು ವ್ಯವಸ್ಥೆ ಮಾಡಲಾಗಿತ್ತು.</p>.<p><strong>ದಾಸೋಹ ಗುಣ ಅನಾವರಣ:</strong> ದಾಸೋಹಕ್ಕೆ ಹೆಸರಾದ ಶರಣ ಬಸವೇಶ್ವರರ ದೇವಸ್ಥಾನದ ಆವರಣದಲ್ಲಿ ಭಕ್ತರ ದಾಸೋಹ ಗುಣ ಅನಾವರಣಗೊಂಡಿತು. ಭಕ್ತರು ತಮ್ಮ ಶಕ್ತ್ಯಾನುಸಾರ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು ದೇವಸ್ಥಾನದ ಆವರಣದಲ್ಲಿ ವಿವಿಧೆಡೆಯಿಂದ ಬಂದಿದ್ದ ಸಹ ಭಕ್ತರಿಗೆ ಉಣಬಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪವಿತ್ರ ಶ್ರಾವಣ ಮಾಸದ ಮೂರನೇ ಸೋಮವಾರದ ಅಂಗವಾಗಿ ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬಂತು.</p><p>ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ ನಡೆಯಿತು. ಉಭಯ ಶರಣರ ಗದ್ದುಗೆಗೆ ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.</p><p>ಜಿಲ್ಲೆ ಮಾತ್ರವಲ್ಲದೆ ನೆರೆಯ ಬೀದರ್, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಭಕ್ತರು ಬಂದು ಶರಣಬಸವೇಶ್ವರರ ದರ್ಶನ ಪಡೆದರು.</p><p>ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು, ಕಾಯಿ, ಕರ್ಪೂರ, ಬಿಲ್ವಪತ್ರೆ ಅರ್ಪಿಸಿ ಭಕ್ತಿಮೆರೆದರು.</p><p>ಶರಣ ಬಸವೇಶ್ವರರ ದರ್ಶನಕ್ಕೆ ಅನುಕೂಲ ಕಲ್ಪಿಸಲು ದೇವಸ್ಥಾನದಲ್ಲಿ ನಾಲ್ಕು ಸಾಲುಗಳ ವ್ಯವಸ್ಥೆ ಮಾಡಲಾಗಿತ್ತು. ಒಂದು ಗಣ್ಯರ ಸಾಲು, ಎರಡು ಗರ್ಭಗುಡಿ ಎದುರು ಪ್ರವೇಶ ಕಲ್ಪಿಸುವ ಸಾಲು ಹಾಗೂ ಮತ್ತೊಂದು ದೇವಸ್ಥಾನದ ಹೊರಗಿನಿಂದಲೇ ಕೈಮುಗಿದು ಭಕ್ತಿ ಅರ್ಪಿಸಲು ವ್ಯವಸ್ಥೆ ಮಾಡಲಾಗಿತ್ತು.</p>.<p><strong>ದಾಸೋಹ ಗುಣ ಅನಾವರಣ:</strong> ದಾಸೋಹಕ್ಕೆ ಹೆಸರಾದ ಶರಣ ಬಸವೇಶ್ವರರ ದೇವಸ್ಥಾನದ ಆವರಣದಲ್ಲಿ ಭಕ್ತರ ದಾಸೋಹ ಗುಣ ಅನಾವರಣಗೊಂಡಿತು. ಭಕ್ತರು ತಮ್ಮ ಶಕ್ತ್ಯಾನುಸಾರ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು ದೇವಸ್ಥಾನದ ಆವರಣದಲ್ಲಿ ವಿವಿಧೆಡೆಯಿಂದ ಬಂದಿದ್ದ ಸಹ ಭಕ್ತರಿಗೆ ಉಣಬಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>