ಕಲಬುರಗಿ:ವಿಧಾನಸಭೆವಿರೋಧಪಕ್ಷದನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆಚಿಂಚೋಳಿತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಸಭೆ ನಡೆಸುತ್ತಿದ್ದ ವೇಳೆಯೇ ಭೂಮಿಯಿಂದ ಶಬ್ದ ಕೇಳಿ ಬಂತು.
ಅಲ್ಲಿಂದಲೇ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಕರೆ ಮಾಡಿದ ಸಿದ್ದರಾಮಯ್ಯ ಅವರು ಈ ಗ್ರಾಮಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದರು.
‘ಗ್ರಾಮಸ್ಥರಿಗೆ ತಾತ್ಕಾಲಿಕವಾಗಿ ಪುನರ್ವಸತಿ ಕಲ್ಪಿಸುವ ಕೆಲಸವನ್ನು ಜಿಲ್ಲಾಧಿಕಾರಿಯೇ ಮಾಡಬೇಕಿತ್ತು. ಅವರು ಒಂದು ಬಾರಿಯೂ ಈ ಗ್ರಾಮಕ್ಕೆ ಬಂದಿಲ್ಲ. ನಾನು ಬರುತ್ತೇನೆ ಎಂದು ತಿಳಿದ ನಂತರ ಇಲ್ಲಿಗೆ ಭೇಟಿ ನೀಡಿದ್ದಾರೆ’ ಎಂದು ಸಿದ್ದರಾಮಯ್ಯ ಹರಿಹಾಯ್ದರು.
ಕಳೆದ ಹಲವು ದಿನಗಳಿಂದ ಈ ಗ್ರಾಮದಲ್ಲಿ ಭೂಕಂಪನದ ಅನುಭವವಾಗುತ್ತಿರುವ ಬಗ್ಗೆ ವರದಿಯಾಗುತ್ತಿವೆ.