ರಾಜ್ಯ ಸರ್ಕಾರದ ಪ್ರವಾಹ ಪೀಡಿತರಿಗೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಮತ್ತು ಜನರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ಗುರುವಾರ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಶೀಘ್ರವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದ ಜೊತೆ ರಾಜ್ಯದ ಪಾಲು ಸೇರಿದಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದರು.