ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿರಿಯ ದಲಿತ ಮುಖಂಡ ಡಾ. ವಿಠ್ಠಲ ದೊಡ್ಡಮನಿ, ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಎಸ್. ಕೌಲಗಿ, ಕಾರ್ಯಾಧ್ಯಕ್ಷ ಲಚ್ಚಪ್ಪ ಎಸ್. ಜಮಾದಾರ, ಬಸಯ್ಯ ಗುತ್ತೇದಾರ, ‘ಡಿ. ದೇವರಾಜ ಅರಸು ನಂತರ ಶೋಷಿತರ, ಹಿಂದುಳಿದವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ಸಿದ್ದರಾಮಯ್ಯ. ಹಾಗಾಗಿ ಅವರಿಗೆ ಜನ್ಮದಿನ ಆಚರಿಸಿಕೊಳ್ಳಲು ಇಷ್ಟ ಇಲ್ಲದಿದ್ದರೂ ಅಭಿಮಾನಿಗಳ ಒತ್ತಾಯದ ಮೇರೆಗೆ ಆಯೋಜಿಸಲಾಗಿದೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಅವರು ಭಾಗವಹಿಸುತ್ತಿದ್ದಾರೆ’ ಎಂದರು.