ಲಿಂ.ಸಿದ್ದಯ್ಯಪ್ಪ ಸ್ವಾಮೀಜಿ ಸಂಸಾರಸ್ಥರಾಗಿದ್ದು, ಅವರಿಗೆ ಐವರು ಪುತ್ರರು ಇದ್ದಾರೆ. 55 ವರ್ಷಗಳಿಂದ ಶ್ರೀಮಠದ ಪೀಠಾಧಿಪತಿಯಾಗಿದ್ದರು. ಮಠದಲ್ಲಿ ನಿರಂತರವಾಗಿ ಅನ್ನ ದಾಸೋಹ ಸೇವೆ ನಡೆಸಿಕೊಂಡು ಬಂದಿದ್ದರು. ಜೇವರ್ಗಿ, ಕಟ್ಟಿಸಂಗಾವಿ, ಸೋಮನಾಥಹಳ್ಳಿ, ನಡುವಿನಹಳ್ಳಿ, ಕಡೆಹಳ್ಳಿ, ಚನ್ನೂರ, ಬುಟ್ನಾಳ, ಗೋಗಿ, ಹರನೂರ, ತಿಳಗುಳ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶ್ರೀಗಳಿಗೆ ಭಕ್ತರು ಇದ್ದಾರೆ. ಪ್ರತಿ ವರ್ಷ ಯುಗಾದಿ ನಂತರ 11ನೇ ದಿನಕ್ಕೆ ನಾಲವಾರ ಕೋರಿಸಿದ್ಧೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಡಾ.ಸಿದ್ಧತೋಂಟೇಂದ್ರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಪ್ರಭು ಬಸಯ್ಯ ತಾತನವರ ಜಾತ್ರೆ, ರಥೋತ್ಸವ ಹಾಗೂ ಧಾರ್ಮಿಕ ಸಭೆ ನಡೆಸಿದ್ದರು.