<p><strong>ಕಲಬುರ್ಗಿ:</strong> 2025ರಲ್ಲಿ ಬಿಜೆಪಿ ಮಾತೃಸಂಸ್ಥೆ ಆರ್ಎಸ್ಎಸ್ಗೆ 100 ವರ್ಷಗಳು ತುಂಬಲಿವೆ. ಆ ಹೊತ್ತಿಗೆಸಂದರ್ಭದಲ್ಲಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲೆಂದೇಸಿಎಎ, ಎನ್ಆರ್ಸಿ, ಎನ್ಪಿಆರ್ಜಾರಿಗೊಳಿಸಲಾಗುತ್ತಿದೆ ಎಂದು ಸಿಪಿಎಂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಟೀಕಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಿಂದ ಮನೆ ಮನೆಗೆ ತೆರಳಿ ಜಾಗೃತಿ ಮಾಡಿಸಲಾಗುವುದು ಎಂದರು.</p>.<p>ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ. ದೇಶದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಕೇಂದ್ರ ಸರ್ಕಾರದ ಪ್ರಕಾರ 4.8 ಜಿಡಿಪಿ ಇದೆ. ಆದರೆ ಅಂತರರಾಷ್ಟ್ರೀಯ ಸಂಸ್ಥೆಗಳ ಪ್ರಕಾರ ಭಾರತದ ಆರ್ಥಿಕ ವ್ಯವಸ್ಥೆ ಕುಸಿದಿದ್ದು, ಜಿಡಿಪಿ ಶೇ 2.8 ಇದೆ ಎಂದು ಮಾಹಿತಿ ನೀಡಿದರು.</p>.<p>ಅಟೊಮೊಬೈಲ್ ಮತ್ತು ಜವಳಿ ಉದ್ಯಮದಲ್ಲಿ 30 ಲಕ್ಷ ಉದ್ಯೋಗಗಳು ಕಡಿತಗೊಂಡಿವೆ ದೂರಿದರು. ಈ ಸರ್ಕಾರದ ಆಡಳಿತದಲ್ಲಿ ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ. ಶ್ರೀಮಂತರು ಶ್ರೀಮಂತರಾಗಿ ಬೆಳೆಯುತ್ತಿದ್ದಾರೆ. ಗೃಹಸಚಿವ ಅಮಿತ್ ಶಾ ಬ್ರಿಟಿಷರ ಹಾಗೆ ಆಡಳಿತ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಎ ವಾಪಸ್ ತೆಗೆದುಕೊಳ್ಳುವುದಿಲ್ಲವೆಂದು ಹೇಳುತ್ತಾರೆ. ಬ್ರಿಟಿಷರು ಇದೇ ತರಹ ಮಾತಾಡುತ್ತಿದ್ದರು ಎಂದು ವಿಮರ್ಶಿಸಿದರು.</p>.<p>ಎನ್ಆರ್ಸಿ, ಎನ್ಪಿಆರ್ ಕುರಿತು ಸಾರ್ವಜನಿಕರ ಮನೆ ಮನೆಗೆ ಸರ್ಕಾರದವರು ಬಂದು ವಾಸಸ್ಥಳದ ಕುರಿತು ಏನೇ ಕೇಳಿದರೂ ಉತ್ತರ ಕೊಡಬೇಡಿ. ಯಾವುದೇ ದಾಖಲಾತಿ ನೀಡಬೇಡಿ ಎಂದು ಹೇಳುವ ಸಲುವಾಗಿ ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಜನವರಿ 23ರಂದು ನೇತಾಜಿ ಸುಭಾಷ್ ಚಂದ್ರಬೋಸರ ಜನ್ಮದಿನದಂದು ಪ್ರಾರಂಭ ಮಾಡಿ ಜ.26ನೇ ದಿವಸವನ್ನು ಸಂವಿಧಾನ ಶಪಥ ದಿನವನ್ನಾಗಿ ಆಚರಿಸಲಾಗುವುದು. ಹುತಾತ್ಮ ದಿನದಂದು (ಜನವರಿ 30) ಗಾಂಧಿ ಕೊಂದವರ ವಿರುದ್ಧ ಪ್ರತಿಭಟಿಸಲಾಗುವುದು ಎಂದು ಯೆಚೂರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> 2025ರಲ್ಲಿ ಬಿಜೆಪಿ ಮಾತೃಸಂಸ್ಥೆ ಆರ್ಎಸ್ಎಸ್ಗೆ 100 ವರ್ಷಗಳು ತುಂಬಲಿವೆ. ಆ ಹೊತ್ತಿಗೆಸಂದರ್ಭದಲ್ಲಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲೆಂದೇಸಿಎಎ, ಎನ್ಆರ್ಸಿ, ಎನ್ಪಿಆರ್ಜಾರಿಗೊಳಿಸಲಾಗುತ್ತಿದೆ ಎಂದು ಸಿಪಿಎಂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಟೀಕಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಿಂದ ಮನೆ ಮನೆಗೆ ತೆರಳಿ ಜಾಗೃತಿ ಮಾಡಿಸಲಾಗುವುದು ಎಂದರು.</p>.<p>ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ. ದೇಶದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಕೇಂದ್ರ ಸರ್ಕಾರದ ಪ್ರಕಾರ 4.8 ಜಿಡಿಪಿ ಇದೆ. ಆದರೆ ಅಂತರರಾಷ್ಟ್ರೀಯ ಸಂಸ್ಥೆಗಳ ಪ್ರಕಾರ ಭಾರತದ ಆರ್ಥಿಕ ವ್ಯವಸ್ಥೆ ಕುಸಿದಿದ್ದು, ಜಿಡಿಪಿ ಶೇ 2.8 ಇದೆ ಎಂದು ಮಾಹಿತಿ ನೀಡಿದರು.</p>.<p>ಅಟೊಮೊಬೈಲ್ ಮತ್ತು ಜವಳಿ ಉದ್ಯಮದಲ್ಲಿ 30 ಲಕ್ಷ ಉದ್ಯೋಗಗಳು ಕಡಿತಗೊಂಡಿವೆ ದೂರಿದರು. ಈ ಸರ್ಕಾರದ ಆಡಳಿತದಲ್ಲಿ ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ. ಶ್ರೀಮಂತರು ಶ್ರೀಮಂತರಾಗಿ ಬೆಳೆಯುತ್ತಿದ್ದಾರೆ. ಗೃಹಸಚಿವ ಅಮಿತ್ ಶಾ ಬ್ರಿಟಿಷರ ಹಾಗೆ ಆಡಳಿತ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಎ ವಾಪಸ್ ತೆಗೆದುಕೊಳ್ಳುವುದಿಲ್ಲವೆಂದು ಹೇಳುತ್ತಾರೆ. ಬ್ರಿಟಿಷರು ಇದೇ ತರಹ ಮಾತಾಡುತ್ತಿದ್ದರು ಎಂದು ವಿಮರ್ಶಿಸಿದರು.</p>.<p>ಎನ್ಆರ್ಸಿ, ಎನ್ಪಿಆರ್ ಕುರಿತು ಸಾರ್ವಜನಿಕರ ಮನೆ ಮನೆಗೆ ಸರ್ಕಾರದವರು ಬಂದು ವಾಸಸ್ಥಳದ ಕುರಿತು ಏನೇ ಕೇಳಿದರೂ ಉತ್ತರ ಕೊಡಬೇಡಿ. ಯಾವುದೇ ದಾಖಲಾತಿ ನೀಡಬೇಡಿ ಎಂದು ಹೇಳುವ ಸಲುವಾಗಿ ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಜನವರಿ 23ರಂದು ನೇತಾಜಿ ಸುಭಾಷ್ ಚಂದ್ರಬೋಸರ ಜನ್ಮದಿನದಂದು ಪ್ರಾರಂಭ ಮಾಡಿ ಜ.26ನೇ ದಿವಸವನ್ನು ಸಂವಿಧಾನ ಶಪಥ ದಿನವನ್ನಾಗಿ ಆಚರಿಸಲಾಗುವುದು. ಹುತಾತ್ಮ ದಿನದಂದು (ಜನವರಿ 30) ಗಾಂಧಿ ಕೊಂದವರ ವಿರುದ್ಧ ಪ್ರತಿಭಟಿಸಲಾಗುವುದು ಎಂದು ಯೆಚೂರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>