ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯ ಸುನಿಲ್ ವಲ್ಯಾಪುರೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಬೀದರ್, ಹೊಸಪೇಟೆ, ಗಂಗಾವತಿ ಮತ್ತು ರಾಯಚೂರು ನಗರಸಭೆಗಳು, ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳು ಈ ಯೋಜನೆಗೆ ಆಯ್ಕೆಯಾಗಿವೆ’ ಎಂದಿದ್ದಾರೆ.
‘ಒಂದು ಲಕ್ಷ ಜನಸಂಖ್ಯೆಗಿಂತ ಕಡಿಮೆ ಇರುವ ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳ ತಲಾ 12, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ತಲಾ 7, ಕೊಪ್ಪಳದ 8 ಹಾಗೂ ಬೀದರ್ನ 6 ಪಟ್ಟಣ/ನಗರ ಪ್ರದೇಶಗಳನ್ನು ಆಯ್ಕೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.