ಲಾಡ್ಲಾಪುರ (ವಾಡಿ): ಹಾವು ಕಡಿತದಿಂದ ಬಾಲಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ.
ಅಶ್ವಿತ್ ರಾಜು ದಂಡೋತಿ (5) ಮೃತಪಟ್ಟ ಬಾಲಕ.
ತಾಯಿಯೊಂದಿಗೆ ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ಹಾವು ಕಚ್ಚಿದೆ. ತಕ್ಷಣವೇ ಮಗುವಿನ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದೇ ಮಂತ್ರವಾದಿಯ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯೂ ಸಮಧಾನವಾಗದೇ ನಾಲವಾರ ಗ್ರಾಮದ ಮತ್ತೊಬ್ಬ ಮಂತ್ರವಾದಿಯ ಬಳಿ ಹೋಗಿದ್ದಾರೆ ಎನ್ನಲಾಗಿದೆ.
ಕೊನೆಗೆ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮಗು ನಿಧನ ಹೊಂದಿದೆ.