ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ತಾಪುರ ತಾಲ್ಲೂಕಿನಲ್ಲಿ ಹಾವು ಕಚ್ಚಿ ಬಾಲಕ ಸಾವು

Last Updated 18 ಫೆಬ್ರುವರಿ 2021, 8:02 IST
ಅಕ್ಷರ ಗಾತ್ರ

ಲಾಡ್ಲಾಪುರ (ವಾಡಿ): ಹಾವು ಕಡಿತದಿಂದ ಬಾಲಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ.

ಅಶ್ವಿತ್ ರಾಜು ದಂಡೋತಿ (5) ಮೃತಪಟ್ಟ ಬಾಲಕ.

ತಾಯಿಯೊಂದಿಗೆ ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ಹಾವು ಕಚ್ಚಿದೆ. ತಕ್ಷಣವೇ ಮಗುವಿನ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದೇ ಮಂತ್ರವಾದಿಯ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯೂ ಸಮಧಾನವಾಗದೇ ನಾಲವಾರ ಗ್ರಾಮದ ಮತ್ತೊಬ್ಬ ಮಂತ್ರವಾದಿಯ ಬಳಿ ಹೋಗಿದ್ದಾರೆ
ಎನ್ನಲಾಗಿದೆ.

ಕೊನೆಗೆ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮಗು ನಿಧನ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT