ಆಳಂದ: ತಾಲ್ಲೂಕಿನ ಹಿತ್ತಲ ಶಿರೂರು ಗ್ರಾಮದ ಕ್ವಾರಂಟೈನ್ ಕೇಂದ್ರದಲ್ಲಿದ್ದಲಕ್ಷ್ಮಿಕಾಂತ ಬಾಬು ಎಂಬುವವರಿಗೆ ಮಂಗಳವಾರ ಹಾವು ಕಚ್ಚಿದ್ದು, ತಕ್ಷಣ ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಿತ್ತಲ ಶಿರೂರು ಗ್ರಾಮದ ಪಂಚಾಯಿತಿ ವ್ಯಾಪ್ತಿಯ ಕುಡಕಿ ಗ್ರಾಮದ ನಿವಾಸಿಯಾಗಿರುವ ಲಕ್ಷ್ಮಿಕಾಂತ ಮುಂಬೈನಿಂದ ವಾಪಸಾಗಿ 12 ದಿನಗಳಿಂದ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಚಿಕಿತ್ಸೆ ನಂತರ ಮನೆಗೆ ತೆರಳಿದ್ದಾರೆ.