‘ಪ್ರಜಾವಾಣಿ’ ಅಕ್ಟೋಬರ್ 1ರ ಸಂಚಿಕೆಯಲ್ಲಿ ಪ್ರಕಟಿಸಿದ್ದ ‘ರಸ್ತೆ ಸುಸ್ಥಿತಿಯಲ್ಲಿದ್ದರೂ ಮತ್ತೆ ಡಾಂಬರೀಕರಣ’ ವಿಶೇಷ ವರದಿಯನ್ನು ಆಧರಿಸಿ ಈ ದೂರು ನೀಡಿರುವ ಅವರು, ‘ತರಾತುರಿಯಲ್ಲಿ ಅಷ್ಟೊಂದು ಹಣವನ್ನು ವೆಚ್ಚ ಮಾಡಿ ರಸ್ತೆ ನಿರ್ಮಿಸಲಾಗಿದೆ. ಅದೇ ಸಮಯದಲ್ಲಿ ನಗರದಲ್ಲಿ ಹಲವು ರಸ್ತೆಗಳು ತಗ್ಗು ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದರೂ ಅವುಗಳ ದುರಸ್ತಿಗೆ ಮುಂದಾಗದ ಇಲಾಖೆ ಮೊದಲೇ ಉತ್ತಮ ಸ್ಥಿತಿಯಲ್ಲಿರುವ ರಸ್ತೆಗೆ ಅಷ್ಟೊಂದು ಹಣ ಖರ್ಚು ಮಾಡುವ ಅಗತ್ಯವೇನಿತ್ತು’ ಎಂದು ಪ್ರಶ್ನಿಸಿದ್ದಾರೆ.