<p><strong>ಕಲಬುರ್ಗಿ:</strong> ‘ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರೋಹಿಣಾಕ್ಷ ಶಿರ್ಲಾಲು ತಮ್ಮ ಅಂಕಣದಲ್ಲಿ, ಈಚೆಗೆ ನಿಧನರಾದ ಸಾಮಾಜಿಕ ಕಾರ್ಯಕರ್ತ ಫಾದರ್ ಸ್ಟ್ಯಾನಿ ಸ್ವಾಮಿ ಅವರನ್ನು ಅಪರಾಧಿ ಎಂಬಂತೆ ಬಿಂಬಿಸಿದ್ದಾರೆ. ಕೂಡಲೇ ಅವರನ್ನು ಅಮಾನತು ಮಾಡಬೇಕು’ ಎಂದು ಹೋರಾಟಗಾರ್ತಿ ಕೆ.ನೀಲಾ ಒತ್ತಾಯಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಫಾದರ್ ಸ್ಟ್ಯಾನ್ ಸ್ವಾಮಿ ಆರೋಪಿಯಾಗಿದ್ದರು. ಅವರ ಮೇಲಿನ ಆರೋಪ ಸಾಬೀತಾಗಿಲ್ಲ’ ಎಂದರು.</p>.<p>‘ಫಾದರ್ ಸ್ಟ್ಯಾನಿ ಸ್ವಾಮಿ ಅವರು ಉತ್ತಮ ವ್ಯಕ್ತಿ. ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ನಾಯಾಲಯ ಗೌರವಿಸುತ್ತದೆ ಎಂದು ಮುಂಬೈ ಹೈಕೋರ್ಟ್ ಹೇಳಿದೆ. ಆದರೆ, ರೋಹಿಣಾಕ್ಷ ಅವರು ಹೋರಾಟಗಾರರನ್ನು ರಾಷ್ಟ್ರ ವಿರೋಧಿಗಳು ಎಂಬಂತೆ ಬಿಂಬಿಸಿರುವುದು ಖಂಡನೀಯ’ ಎಂದರು.</p>.<p>‘ರೋಹಿಣಾಕ್ಷ ಅವರು ವಿ.ವಿ ಬೋಧಕ ಸಿಬ್ಬಂದಿಯಾಗಿ ಪ್ರಜಾಪ್ರಭುತ್ವದ ಆಶಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಅದನ್ನು ಬಿಟ್ಟು ಮತೀಯ ಭಾವನೆ ಬಿತ್ತುವ ರೀತಿಯಲ್ಲಿ ಅಂಕಣ ಬರೆಯಬಾರದು. ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವಿ.ವಿಯ ಕುಲಪತಿಗೆ ದೂರು ನೀಡಲಾಗಿದೆ’ ಎಂದು ಹೇಳಿದರು.</p>.<p>ಕೇಂದ್ರೀಯ ವಿಶ್ವವಿದ್ಯಾಲಯ ಶುದ್ಧೀಕರಣ ಹೋರಾಟ ಸಮಿತಿ ಸಂಚಾಲಕ ಆರ್.ಕೆ.ಹುಡಗಿ ಮಾತನಾಡಿ, ‘ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರತಿಭಾವಂತರು ಇದ್ದರೂ ಅವರನ್ನು ಪರಿಗಣಿಸಿಲ್ಲ. ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಅರ್ಜುನ ಭದ್ರೆ, ಸುಧಾಮ ಧನ್ನಿ, ಅಲ್ತಾಫ್ ಇನಾಮದಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p><strong>ಮನವಿ ಸಲ್ಲಿಕೆ: </strong>ಕೆ.ನೀಲಾ ಮತ್ತು ಆರ್.ಕೆ. ಹುಡಗಿ ನೇತೃತ್ವದ ನಿಯೋಗ ಕೇಂದ್ರೀಯ ವಿ.ವಿ. ಹಂಗಾಮಿ ಕುಲಪತಿ ಪ್ರೊ. ಎಂ.ವಿ. ಅಳಗವಾಡಿ ಅವರನ್ನು ಭೇಟಿಯಾಗಿ ಈ ವಿಷಯವಾಗಿ ಮನವಿ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರೋಹಿಣಾಕ್ಷ ಶಿರ್ಲಾಲು ತಮ್ಮ ಅಂಕಣದಲ್ಲಿ, ಈಚೆಗೆ ನಿಧನರಾದ ಸಾಮಾಜಿಕ ಕಾರ್ಯಕರ್ತ ಫಾದರ್ ಸ್ಟ್ಯಾನಿ ಸ್ವಾಮಿ ಅವರನ್ನು ಅಪರಾಧಿ ಎಂಬಂತೆ ಬಿಂಬಿಸಿದ್ದಾರೆ. ಕೂಡಲೇ ಅವರನ್ನು ಅಮಾನತು ಮಾಡಬೇಕು’ ಎಂದು ಹೋರಾಟಗಾರ್ತಿ ಕೆ.ನೀಲಾ ಒತ್ತಾಯಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಫಾದರ್ ಸ್ಟ್ಯಾನ್ ಸ್ವಾಮಿ ಆರೋಪಿಯಾಗಿದ್ದರು. ಅವರ ಮೇಲಿನ ಆರೋಪ ಸಾಬೀತಾಗಿಲ್ಲ’ ಎಂದರು.</p>.<p>‘ಫಾದರ್ ಸ್ಟ್ಯಾನಿ ಸ್ವಾಮಿ ಅವರು ಉತ್ತಮ ವ್ಯಕ್ತಿ. ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ನಾಯಾಲಯ ಗೌರವಿಸುತ್ತದೆ ಎಂದು ಮುಂಬೈ ಹೈಕೋರ್ಟ್ ಹೇಳಿದೆ. ಆದರೆ, ರೋಹಿಣಾಕ್ಷ ಅವರು ಹೋರಾಟಗಾರರನ್ನು ರಾಷ್ಟ್ರ ವಿರೋಧಿಗಳು ಎಂಬಂತೆ ಬಿಂಬಿಸಿರುವುದು ಖಂಡನೀಯ’ ಎಂದರು.</p>.<p>‘ರೋಹಿಣಾಕ್ಷ ಅವರು ವಿ.ವಿ ಬೋಧಕ ಸಿಬ್ಬಂದಿಯಾಗಿ ಪ್ರಜಾಪ್ರಭುತ್ವದ ಆಶಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಅದನ್ನು ಬಿಟ್ಟು ಮತೀಯ ಭಾವನೆ ಬಿತ್ತುವ ರೀತಿಯಲ್ಲಿ ಅಂಕಣ ಬರೆಯಬಾರದು. ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವಿ.ವಿಯ ಕುಲಪತಿಗೆ ದೂರು ನೀಡಲಾಗಿದೆ’ ಎಂದು ಹೇಳಿದರು.</p>.<p>ಕೇಂದ್ರೀಯ ವಿಶ್ವವಿದ್ಯಾಲಯ ಶುದ್ಧೀಕರಣ ಹೋರಾಟ ಸಮಿತಿ ಸಂಚಾಲಕ ಆರ್.ಕೆ.ಹುಡಗಿ ಮಾತನಾಡಿ, ‘ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರತಿಭಾವಂತರು ಇದ್ದರೂ ಅವರನ್ನು ಪರಿಗಣಿಸಿಲ್ಲ. ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಅರ್ಜುನ ಭದ್ರೆ, ಸುಧಾಮ ಧನ್ನಿ, ಅಲ್ತಾಫ್ ಇನಾಮದಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p><strong>ಮನವಿ ಸಲ್ಲಿಕೆ: </strong>ಕೆ.ನೀಲಾ ಮತ್ತು ಆರ್.ಕೆ. ಹುಡಗಿ ನೇತೃತ್ವದ ನಿಯೋಗ ಕೇಂದ್ರೀಯ ವಿ.ವಿ. ಹಂಗಾಮಿ ಕುಲಪತಿ ಪ್ರೊ. ಎಂ.ವಿ. ಅಳಗವಾಡಿ ಅವರನ್ನು ಭೇಟಿಯಾಗಿ ಈ ವಿಷಯವಾಗಿ ಮನವಿ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>