<p><strong>ಕಾಳಗಿ</strong>: ತಾಲ್ಲೂಕಿನ ಗಡಿಕೇಶ್ವರ ಗ್ರಾಮದ ಆರಾಧ್ಯದೈವ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯದ ನೂತನ ಶಿಖರದ ಕಳಸಾರೋಹಣ ಮತ್ತು ಶ್ರಾವಣ ಮಾಸದ ಅಂಗವಾಗಿ ಸೋಲಾಪುರ ಸಿದ್ದರಾಮೇಶ್ವರ ಮಹಾಪುರಾಣ ಕಾರ್ಯಕ್ರಮಕ್ಕೆ ಮಂಗಳವಾರ ರಾತ್ರಿ ಚಾಲನೆ ನೀಡಲಾಯಿತು.</p>.<p>ಅಖಿಲ ಭಾರತ ವೀರಶೈವ ಮಹಾಸಭಾದ ರಾಜಶೇಖರ ನಿಲಂಗಿ ಮತ್ತು ಶರಣು ಮೋತಕಪಲ್ಲಿ ಉದ್ಘಾಟಿಸಿದರು. ಭರತನೂರ ವಿರಕ್ತಮಠದ ಚಿಕ್ಕಗುರುನಂಜೇಶ್ವರ ಸ್ವಾಮೀಜಿ, ರಾಯಕೋಡ ಕಟ್ಟಿಮಠದ ಚಿಕ್ಕ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಸೇಡಂ ಗೌರವಾಧ್ಯಕ್ಷ ಶಿವಯ್ಯಸ್ವಾಮಿ ಬಿಬ್ಬಳ್ಳಿ, ಚಿಂಚೋಳಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಲಾಮೂರ ಮಾತನಾಡಿದರು. ಚಿಂಚೋಳಿ ವೀರಶೈವ ಸಮಾಜದ ಅಧ್ಯಕ್ಷ ಸಂಜುಕುಮಾರ ಪಾಟೀಲ್, ವೀರೇಶ ಯಂಪಳ್ಳಿ, ಶಿವರಾಜ ವಾಲಿ ಅನೇಕರು ಇದ್ದರು.</p>.<p>ಚಿಮ್ಮಾ ಇದ್ಲಾಯಿ ಹಿರೇಮಠದ ವಿಜಯ ಮಹಾಂತೇಶ್ವರ ಶಿವಾಚಾರ್ಯರು ಪುರಾಣ ಹೇಳಿದರು. ಆ.22ರವರೆಗೆ ಪ್ರತಿರಾತ್ರಿ 8ಕ್ಕೆ ಪುರಾಣ ಕಾರ್ಯಕ್ರಮ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ</strong>: ತಾಲ್ಲೂಕಿನ ಗಡಿಕೇಶ್ವರ ಗ್ರಾಮದ ಆರಾಧ್ಯದೈವ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯದ ನೂತನ ಶಿಖರದ ಕಳಸಾರೋಹಣ ಮತ್ತು ಶ್ರಾವಣ ಮಾಸದ ಅಂಗವಾಗಿ ಸೋಲಾಪುರ ಸಿದ್ದರಾಮೇಶ್ವರ ಮಹಾಪುರಾಣ ಕಾರ್ಯಕ್ರಮಕ್ಕೆ ಮಂಗಳವಾರ ರಾತ್ರಿ ಚಾಲನೆ ನೀಡಲಾಯಿತು.</p>.<p>ಅಖಿಲ ಭಾರತ ವೀರಶೈವ ಮಹಾಸಭಾದ ರಾಜಶೇಖರ ನಿಲಂಗಿ ಮತ್ತು ಶರಣು ಮೋತಕಪಲ್ಲಿ ಉದ್ಘಾಟಿಸಿದರು. ಭರತನೂರ ವಿರಕ್ತಮಠದ ಚಿಕ್ಕಗುರುನಂಜೇಶ್ವರ ಸ್ವಾಮೀಜಿ, ರಾಯಕೋಡ ಕಟ್ಟಿಮಠದ ಚಿಕ್ಕ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಸೇಡಂ ಗೌರವಾಧ್ಯಕ್ಷ ಶಿವಯ್ಯಸ್ವಾಮಿ ಬಿಬ್ಬಳ್ಳಿ, ಚಿಂಚೋಳಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಲಾಮೂರ ಮಾತನಾಡಿದರು. ಚಿಂಚೋಳಿ ವೀರಶೈವ ಸಮಾಜದ ಅಧ್ಯಕ್ಷ ಸಂಜುಕುಮಾರ ಪಾಟೀಲ್, ವೀರೇಶ ಯಂಪಳ್ಳಿ, ಶಿವರಾಜ ವಾಲಿ ಅನೇಕರು ಇದ್ದರು.</p>.<p>ಚಿಮ್ಮಾ ಇದ್ಲಾಯಿ ಹಿರೇಮಠದ ವಿಜಯ ಮಹಾಂತೇಶ್ವರ ಶಿವಾಚಾರ್ಯರು ಪುರಾಣ ಹೇಳಿದರು. ಆ.22ರವರೆಗೆ ಪ್ರತಿರಾತ್ರಿ 8ಕ್ಕೆ ಪುರಾಣ ಕಾರ್ಯಕ್ರಮ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>