ಆಗಸ್ಟ್ನಲ್ಲಿ ಯಡಾ ಮಾರ್ಟಿನ್ ಅವರನ್ನು ವರ್ಗಾವಣೆಗೊಳಿಸಿ ಉತ್ತರ ಕನ್ನಡ ಎಸ್ಪಿಯಾಗಿದ್ದ ವಿನಾಯಕ ಪಾಟೀಲ ಅವರನ್ನು ನೇಮಕ ಮಾಡಿತ್ತು. ಯಡಾ ಮಾರ್ಟಿನ್ ಅಧಿಕಾರ ವಹಿಸಿಕೊಂಡು ಆರು ತಿಂಗಳಷ್ಟೇ ಅಗಿತ್ತು. ಹೀಗಾಗಿ ಸರ್ಕಾರದ ಈ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್.ನಾರಾಯಣಸ್ವಾಮಿ ಹಾಗೂ ಆರ್.ದೇವದಾಸ್ ಅವರಿದ್ದ ವಿಭಾಗೀಯ ಪೀಠವು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿತು.