<p><strong>ಕಲಬುರ್ಗಿ: </strong>‘ಈಗ ಲಾಕ್ಡೌನ್ ಸಡಿಲಗೊಂಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳನ್ನು ಚುರುಕುಗೊಳಿಸಬೇಕು’ ಎಂದು ಮಂಡಳಿಯ ಅಧ್ಯಕ್ಷದತ್ತಾತ್ರೇಯ ಪಾಟೀಲ ರೇವೂರ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಮಂಡಳಿ ವ್ಯಾಪ್ತಿಯ ಆರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆ ಸಲ್ಲಿಕೆ, ಹಿಂದಿನ ಸಾಲಿನ ಕಾಮಗಾರಿಗಳ ಪ್ರಗತಿ ಕುರಿತು ಅವರು ಮಂಗಳವಾರ ವರ್ಚುವಲ್ ಸಭೆಯಲ್ಲಿ ಚರ್ಚಿಸಿದರು.</p>.<p>‘ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಮಂಡಳಿಯೊಂದಿಗೆ ಕೈಜೋಡಿಸಬೇಕು. ಕೋವಿಡ್ ಲಾಕ್ಡೌನ್ ಕಾರಣ ಅಭಿವದ್ಧಿ ಕಾರ್ಯದ ವೇಗ ಕುಸಿದಿತ್ತು. ಇದೀಗ ಲಾಕ್ಡೌನ್ ಸಡಿಲಿಕೆ ನೀಡಲಾಗಿದ್ದು, ಪ್ರಗತಿ ಹಂತದಲ್ಲಿರುವ ಮಂಡಳಿಯ ಕಾಮಗಾರಿಗಳ ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು’ ಎಂದು ಅಧಿಕಾರಿಗಳಿಗೆ<br />ಸೂಚಿಸಿದರು.</p>.<p>ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ, ವಿವಿಧ ಜಿಲ್ಲಾಧಿಕಾರಿಗಳು ಮತ್ತು ಮಂಡಳಿಯ ಇತರ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>‘ಈಗ ಲಾಕ್ಡೌನ್ ಸಡಿಲಗೊಂಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳನ್ನು ಚುರುಕುಗೊಳಿಸಬೇಕು’ ಎಂದು ಮಂಡಳಿಯ ಅಧ್ಯಕ್ಷದತ್ತಾತ್ರೇಯ ಪಾಟೀಲ ರೇವೂರ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಮಂಡಳಿ ವ್ಯಾಪ್ತಿಯ ಆರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆ ಸಲ್ಲಿಕೆ, ಹಿಂದಿನ ಸಾಲಿನ ಕಾಮಗಾರಿಗಳ ಪ್ರಗತಿ ಕುರಿತು ಅವರು ಮಂಗಳವಾರ ವರ್ಚುವಲ್ ಸಭೆಯಲ್ಲಿ ಚರ್ಚಿಸಿದರು.</p>.<p>‘ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಮಂಡಳಿಯೊಂದಿಗೆ ಕೈಜೋಡಿಸಬೇಕು. ಕೋವಿಡ್ ಲಾಕ್ಡೌನ್ ಕಾರಣ ಅಭಿವದ್ಧಿ ಕಾರ್ಯದ ವೇಗ ಕುಸಿದಿತ್ತು. ಇದೀಗ ಲಾಕ್ಡೌನ್ ಸಡಿಲಿಕೆ ನೀಡಲಾಗಿದ್ದು, ಪ್ರಗತಿ ಹಂತದಲ್ಲಿರುವ ಮಂಡಳಿಯ ಕಾಮಗಾರಿಗಳ ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು’ ಎಂದು ಅಧಿಕಾರಿಗಳಿಗೆ<br />ಸೂಚಿಸಿದರು.</p>.<p>ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ, ವಿವಿಧ ಜಿಲ್ಲಾಧಿಕಾರಿಗಳು ಮತ್ತು ಮಂಡಳಿಯ ಇತರ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>