ಆಳಂದ (ಕಲಬುರಗಿ ಜಿಲ್ಲೆ): ರಾಮ ನವಮಿ ಅಂಗವಾಗಿ ಪಟ್ಟಣದಲ್ಲಿ ಶ್ರೀರಾಮಸೇನೆ ವತಿಯಿಂದ ಶ್ರೀರಾಮಚಂದ್ರನ 15 ಅಡಿ ಎತ್ತರದ ಮೂರ್ತಿಯ ಬೃಹತ್ ಮೆರವಣಿಗೆ ಆರಂಭವಾಗಿದೆ.
ಇತ್ತೀಚೆಗೆ ನಗರದಲ್ಲಿ ಬಿಜೆಪಿ ಹಾಗೂ ಶ್ರೀರಾಮಸೇನೆ ವತಿಯಿಂದ ಆಯೋಜಿಸಿದ್ದ ಮೆರವಣಿಗೆ ಸಂದರ್ಭದಲ್ಲಿ ಎರಡು ಕೋಮುಗಳ ಮಧ್ಯೆ ಘರ್ಷಣೆ ಸಂಭವಿಸುವ ಹಂತ ತಲುಪಿತ್ತು. ಅಂತಿಮವಾಗಿ ಪೊಲೀಸರ ಮಧ್ಯ ಪ್ರವೇಶದಿಂದಾಗಿ ದರ್ಗಾದಲ್ಲಿನ ಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ಸಿಕ್ಕಿತ್ತು.
ಹೀಗಾಗಿ ಇಂದು ನಡೆಯುತ್ತಿರುವ ಮೆರವಣಿಗೆಗೆ ಭಾರಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ನೇತೃತ್ವದಲ್ಲಿ ಒಂದು ಸಾವಿರ ಪೊಲೀಸರ ಭದ್ರತೆ ಒದಗಿಸಲಾಗಿದೆ.
ಆರು ಕೆಎಸ್ಆರ್ ಪಿ ತುಕಡಿ, ಐದು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಇಶಾ ಪಂತ್ 'ಪ್ರಜಾವಾಣಿ'ಗೆ ತಿಳಿಸಿದರು.
ಶ್ರೀರಾಮ ಮಾರ್ಕೆಟ್ ನಿಂದ ಆರಂಭವಾದ ಮೆರವಣಿಗೆ ಬಸ್ ನಿಲ್ದಾಣ, ತಹಶೀಲ್ದಾರ್ ಕಚೇರಿ ಮೂಲಕ ಮರಳಿ ಮಾರುಕಟ್ಟೆ ತಲುಪಲಿದೆ.