ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ನಗರಕ್ಕೆ ಬಂದಿದ್ದ ಕಾರಜೋಳ ಅವರನ್ನು ಭೇಟಿ ಮಾಡಿದ ಸ್ವಾಮೀಜಿ, ಗೌಂಡಿ ಅವರು ವಾಹನ ಜಪ್ತಿ ಮಾಡಿ ದನಗಳನ್ನು ಗೋಶಾಲೆಗೆ ಕಳುಹಿಸುವ ಬದಲು ವಾಹನ ಸಮೇತ ಕಸಾಯಿಖಾನೆಗೆ ಕಳಿಸಿದ್ದಾರೆ. ಆದ್ದರಿಂದ ಅವರನ್ನು ಅಮಾನತುಗೊಳಿಸಿ ಇಲಾಖೆ ತನಿಖೆಗೆ ಒಳಪಡಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೇ 17ರಂದು ನಗರದಲ್ಲಿ ಶ್ರೀರಾಮ ಸೇನಾ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಲಿದ್ದೇವೆ ಎಂದು ತಿಳಿಸಿದರು.