<p><strong>ಕಲಬುರಗಿ</strong>: ಎಸ್ಟಿ ಪ್ರಮಾಣ ಪತ್ರ ವಿತರಣೆಗೆ ಕ್ರಮವಹಿಸುವಂತೆ ಆಗ್ರಹಿಸಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಎದುರು ಧರಣಿ ಸತ್ಯಾಗ್ರಹ ಅಭಿಯಾನವನ್ನು ಕರ್ನಾಟಕ ರಾಜ್ಯ ತಳವಾರ ಎಸ್ಟಿ ಹೋರಾಟ ಸಮಿತಿ ಮುಂದುವರಿಸಿದೆ.</p>.<p>ಬುಧವಾರ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಮನೆ ಎದುರು ಧರಣಿ ನಡೆಸಿದ ಮುಖಂಡರು, ಎಸ್ಟಿ ಪ್ರಮಾಣ ಪತ್ರ ವಿತರಣೆಗೆ ಕ್ರಮವಹಿಸುವಂತೆ ಆಗ್ರಹಿಸಿದರು.</p>.<p>ಧರಣಿ ನಿರತರ ಮನವಿ ಆಲಿಸಿ ಮಾತನಾಡಿದ ಶಾಸಕ ಬಸವರಾಜ ಮತ್ತಿಮಡು, ‘ಕಲಬುರಗಿ–ಯಾದಗಿರಿಯಲ್ಲಿ ಮಾತ್ರವೇ ತಳವಾರರಿಗೆ ಎಸ್ಟಿ ಪ್ರಮಾಣ ಪತ್ರ ಸಿಗದೇ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದ ಜೊತೆಗೆ ಉದ್ದೇಶಪೂರ್ವಕವಾಗಿ ಈ ಸಮಾಜವನ್ನು ತುಳಿಯಲು ಸ್ಥಳೀಯ ಕಾಂಗ್ರೆಸ್ ನಾಯಕರು ತಮ್ಮ ಸಣ್ಣತನ ತೋರುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ಈ ಭಾಗದಲ್ಲಿ ತಳವಾರರಿಗೆ ಎಸ್ಟಿ ಪ್ರಮಾಣ ಪತ್ರ ವಿತರಿಸಲು ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ದ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಈ ಕುರಿತು ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವೆ. ಅಗತ್ಯ ಬಿದ್ದರೆ, ಈ ಹೋರಾಟಕ್ಕಾಗಿ ರಾಜ್ಯಾಧ್ಯಕ್ಷ ಸೇರಿ ಪಕ್ಷದ ನಾಯಕರನ್ನು ಕಲಬುರಗಿಗೆ ಕರೆತರುವೆ’ ಎಂದರು.</p>.<p>ಧರಣಿಯಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಸರ್ದಾರ್ ರಾಯಪ್ಪ, ಮುಖಂಡರಾದ ರೇವಣ್ಣಸಿದ್ಧ ಕಮನಮನಿ, ಲಚ್ಚಪ್ಪ ಜಮಾದಾರ, ಶರಣಪ್ಪ ತಳವಾರ, ವಿದ್ಯಾಧರ ಮಂಗಳೂರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>
<p><strong>ಕಲಬುರಗಿ</strong>: ಎಸ್ಟಿ ಪ್ರಮಾಣ ಪತ್ರ ವಿತರಣೆಗೆ ಕ್ರಮವಹಿಸುವಂತೆ ಆಗ್ರಹಿಸಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಎದುರು ಧರಣಿ ಸತ್ಯಾಗ್ರಹ ಅಭಿಯಾನವನ್ನು ಕರ್ನಾಟಕ ರಾಜ್ಯ ತಳವಾರ ಎಸ್ಟಿ ಹೋರಾಟ ಸಮಿತಿ ಮುಂದುವರಿಸಿದೆ.</p>.<p>ಬುಧವಾರ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಮನೆ ಎದುರು ಧರಣಿ ನಡೆಸಿದ ಮುಖಂಡರು, ಎಸ್ಟಿ ಪ್ರಮಾಣ ಪತ್ರ ವಿತರಣೆಗೆ ಕ್ರಮವಹಿಸುವಂತೆ ಆಗ್ರಹಿಸಿದರು.</p>.<p>ಧರಣಿ ನಿರತರ ಮನವಿ ಆಲಿಸಿ ಮಾತನಾಡಿದ ಶಾಸಕ ಬಸವರಾಜ ಮತ್ತಿಮಡು, ‘ಕಲಬುರಗಿ–ಯಾದಗಿರಿಯಲ್ಲಿ ಮಾತ್ರವೇ ತಳವಾರರಿಗೆ ಎಸ್ಟಿ ಪ್ರಮಾಣ ಪತ್ರ ಸಿಗದೇ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದ ಜೊತೆಗೆ ಉದ್ದೇಶಪೂರ್ವಕವಾಗಿ ಈ ಸಮಾಜವನ್ನು ತುಳಿಯಲು ಸ್ಥಳೀಯ ಕಾಂಗ್ರೆಸ್ ನಾಯಕರು ತಮ್ಮ ಸಣ್ಣತನ ತೋರುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ಈ ಭಾಗದಲ್ಲಿ ತಳವಾರರಿಗೆ ಎಸ್ಟಿ ಪ್ರಮಾಣ ಪತ್ರ ವಿತರಿಸಲು ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ದ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಈ ಕುರಿತು ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವೆ. ಅಗತ್ಯ ಬಿದ್ದರೆ, ಈ ಹೋರಾಟಕ್ಕಾಗಿ ರಾಜ್ಯಾಧ್ಯಕ್ಷ ಸೇರಿ ಪಕ್ಷದ ನಾಯಕರನ್ನು ಕಲಬುರಗಿಗೆ ಕರೆತರುವೆ’ ಎಂದರು.</p>.<p>ಧರಣಿಯಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಸರ್ದಾರ್ ರಾಯಪ್ಪ, ಮುಖಂಡರಾದ ರೇವಣ್ಣಸಿದ್ಧ ಕಮನಮನಿ, ಲಚ್ಚಪ್ಪ ಜಮಾದಾರ, ಶರಣಪ್ಪ ತಳವಾರ, ವಿದ್ಯಾಧರ ಮಂಗಳೂರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>