₹ 1 ಕೋಟಿ ವೆಚ್ಚದಲ್ಲಿ ಮೂರು ವರ್ಷದ ಹಿಂದೆ ಕೆರೆಗೆ ನೀರು ತುಂಬಿಸುವ ಯೋಜನೆಯ ಮೂಲಕ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಅದರ ಫಲವಾಗಿ ನೀರು ಸಂಗ್ರಹಗೊಂಡಿದ್ದರಿಂದ ಅಂತರ್ಜಲ ಮಟ್ಟ ಕುಸಿತವಾಗಿಲ್ಲದಿದ್ದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ.
ಶರಣಬಸಪ್ಪ ದರ್ಶನಾಪುರ, ಜಿಲ್ಲಾ ಉಸ್ತುವಾರಿ ಸಚಿವ
ಕೆರೆಯಲ್ಲಿ ನೀರು ಸಂಗ್ರಹವಾಗಿದ್ದರಿಂದ ಬರದ ನಡುವೆ ನಮಗೆ ನೀರಿನ ಕೊರತೆ ಉಂಟಾಗಿಲ್ಲ. ಜನ ಜಾನುವಾರು ಇದೇ ನೀರು ಆಶ್ರಯಿಸಿಕೊಂಡಿದ್ದೇವೆ. ಕೆರೆಯ ಸುತ್ತ ಬೇಲಿ ಅಳವಡಿಸಬೇಕು.
ದೇವಿಂದ್ರಪ್ಪಗೌಡ, ಹೊಸಕೇರಾ ನಿವಾಸಿ
ಕಾಲುವೆಯ ಮೂಲಕ ನೀರು ಸಂಗ್ರಹಿಸಿಕೊಂಡಿದ್ದರಿಂದ ಕೆರೆಯಲ್ಲಿ ಸಾಕಷ್ಟು ನೀರಿನ ಸಂಗ್ರಹವಿದೆ. ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದು.