ಜಮೀನು ಪಹಣಿ ತಿದ್ದುಪಡಿ, ಆಧಾರ್ ಕಾರ್ಡ್ ಸೇರಿದಂತೆ ಇತರೆ ಸಣ್ಣಪುಟ್ಟ ಕೆಲಸಗಳಿಗಾಗಿ ತಿಂಗಳುಗಟ್ಟಲೆ ಕಚೇರಿಗೆ ಅಲೆಯಬೇಕಿದೆ. ಇದರಿಂದ ರೈತರು ಹಾಗೂ ಜನರು ಹೈರಾಣಾಗಿದ್ದಾರೆ. ಪ್ರತಿ ಕೆಲಸಕ್ಕೂ ಲಂಚ ಕೊಡಬೇಕಾದ ಅನಿವಾರ್ಯತೆ ಇದೆ. ಸರ್ವ ಸರಿಯಿಲ್ಲ, ನಾಳೆ ಬನ್ನಿ ಎಂಬ ನೆಪ ಹೇಳಿ ಸಿಬ್ಬಂದಿ ವಾಪಸ್ ಕಳುಹಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.