ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೋರಾಟದಲ್ಲಿ 20 ಸಾವಿರ ಜನ ಸೇರುವ ನಿರೀಕ್ಷೆ ಹೊಂದಲಾಗಿದ್ದು, ಮಾಜಿ ಸಚಿವರಾದ ಯು.ಟಿ.ಖಾದರ್, ಡಾ.ಶರಣಪ್ರಕಾಶ ಪಾಟೀಲ, ನಟ ಸುಮನ್, ಶಾಸಕರಾದ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿ ಮಾತನಾಡಲಿದ್ದಾರೆ’ ಎಂದರು.