‘ಹೆಲ್ಪ್ಲೈನ್ ಆರಂಭವಾದ ಕೆಲವು ದಿನಗಳವರೆಗೆ ತಮ್ಮ ಓಣಿಗಳಿಗೆ ಯಾರಾದರೂ ಅಪರಿಚಿತರು ಬಂದರೆ ಜನರು ಫೋನ್ ಮಾಡಿ ಮಾಹಿತಿ ನೀಡುತ್ತಿದ್ದರು. ಆದರೆ, ಎರಡು ವಾರಗಳಿಂದ ಅಪರಿಚಿತರು, ಕೊರೊನಾಶಂಕಿತರ ಬಗ್ಗೆ ಮಾಹಿತಿ ನೀಡುವ ಬದಲು ತಮಗೆ ಅಗತ್ಯವಾದ ನೆರವನ್ನು ಸಾರ್ವಜನಿಕರು ಕೇಳುತ್ತಿದ್ದಾರೆ. ಆದರೂ, ಅಷ್ಟೂ ವಿವರಗಳನ್ನು ಬರೆದುಕೊಂಡು ಹೆಚ್ಚುವರಿ ಜಿಲ್ಲಾಧಿಕಾರಿ, ಆಹಾರ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದೇವೆ’ ಎಂದು ಸಹಾಯವಾಣಿಯ ಕರೆ ಸ್ವೀಕರಿಸಲು ನಿಯೋಜಿತರಾದ ಸಿಬ್ಬಂದಿಯೊಬ್ಬರು ತಿಳಿಸಿದರು.