<p><strong>ಜೇವರ್ಗಿ:</strong> ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಗುಂಪು ಗುಂಪಾಗಿ ಕಂಡುಬರುತ್ತಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. </p>.<p>ಪಟ್ಟಣಕ್ಕೆ ವ್ಯಾಪಾರ-ವಹಿವಾಟಿಗಾಗಿ ನಿತ್ಯ ಸಾವಿರಾರು ಜನರು ಬರುತ್ತಾರೆ. ರಾಷ್ಟ್ರೀಯ ಹೆದ್ದಾರಿ-50 ಹಾಗೂ ಬೀದರ- ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯೂ ಪಟ್ಟಣದಲ್ಲಿ ಹಾದು ಹೋಗಿರುವುದರಿಂದ ಸಾವಿರಾರು ವಾಹನಗಳು ಸಂಚರಿಸುತ್ತವೆ.</p>.<p>ಬಿಡಾಡಿ ದನಗಳು ರಾತ್ರಿ ಹಗಲೆನ್ನದೆ ರಸ್ತೆಯ ಮೇಲೆ ಮಲಗಿರುವುದರಿಂದ ಅಪಘಾತಗಳು ಸಂಭವಿಸಿ ಹಲವಾರು ದ್ವಿಚಕ್ರವಾಹನ ಸವಾರರು ಗಾಯಗೊಂಡಿದ್ದಾರೆ. ಈ ಕುರಿತು ಎಚ್ಚರ ವಹಿಸಬೇಕಾದ ಪೊಲೀಸ್ ಇಲಾಖೆ ಮತ್ತು ಪುರಸಭೆ ನಿದ್ರೆಗೆ ಜಾರಿದ್ದು, ಬಿಡಾಡಿ ದನಗಳನ್ನು ನಿಯಂತ್ರಿಸುವವರು ಯಾರು ಎಂಬುದು ಸಾರ್ವಜನಿಕರ ಅಹವಾಲಾಗಿದೆ.</p>.<p>ಪಟ್ಟಣದ ಡಾ.ಅಂಬೇಡ್ಕರ್ ಸರ್ಕಲ್ ದಿಂದ ಕನಕದಾಸ ವೃತ್ತದ ವರೆಗಿನ ಮುಖ್ಯ ರಸ್ತೆಯ ಮೇಲೆ ಮಂಗಳವಾರ ನಡೆಯುವ ಸಂತೆಯಲ್ಲೂ ದನಗಳ ಹಾವಳಿ ಮಿತಿಮೀರಿದೆ. ಕಿರಿದಾದ ರಸ್ತೆಯಲ್ಲಿ ಸಂತೆ ನಡೆಯುವ ಕಾರಣ, ಜನರು ತಿರುಗಾಡಲು ಕಷ್ಟ ಪಡುತ್ತಾರೆ. ಇಂತಹ ಸ್ಥಿತಿಯಲ್ಲಿ ಹಣ್ಣು-ತರಕಾರಿಗಾಗಿ ದನಗಳ ಹಿಂಡು ಸಂತೆಯಲ್ಲಿ ನುಗ್ಗಿ ಜನರಿಗೆ ತೊಂದರೆ ಮಾಡುತ್ತಿವೆ.</p>.<p>ಬೀದಿ ಬದಿಯ ಹೂವು-ಹಣ್ಣು ಸೇರಿದಂತೆ ಇತರೆ ದಿನಸಿ ವ್ಯಾಪಾರಿಗಳು ಕೂಡ ಬಿಡಾಡಿ ದನಗಳ ಹಾವಳಿಗೆ ತೀವ್ರ ಬೇಸತ್ತು ಹೋಗಿದ್ದಾರೆ. ವ್ಯಾಪಾರ ನಡೆಸುವುದೇ ದುಸ್ತರವಾಗಿದೆ. ಸ್ವಲ್ಪ ಯಾಮಾರಿದರೂ ತರಕಾರಿಗಳಿಗೆ ಬಾಯಿ ಹಾಕಿ ಚೆಲ್ಲಾಪಿಲ್ಲಿ ಮಾಡುತ್ತವೆ ಎಂಬುದು ತರಕಾರಿ-ಹಣ್ಣು ವ್ಯಾಪಾರಸ್ಥರ ಗೋಳಾಗಿದೆ.</p>.<p>ಪೊಲೀಸ್ ಇಲಾಖೆ ಹಾಗೂ ಪುರಸಭೆ ಆಡಳಿತ ಈಗಲಾದರೂ ಎಚ್ಚೆತ್ತುಕೊಂಡು ಬಿಡಾಡಿ ದನಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ದನಗಳ ನಿಯಂತ್ರಣಕ್ಕೆ ಮುಂದಾಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ:</strong> ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಗುಂಪು ಗುಂಪಾಗಿ ಕಂಡುಬರುತ್ತಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. </p>.<p>ಪಟ್ಟಣಕ್ಕೆ ವ್ಯಾಪಾರ-ವಹಿವಾಟಿಗಾಗಿ ನಿತ್ಯ ಸಾವಿರಾರು ಜನರು ಬರುತ್ತಾರೆ. ರಾಷ್ಟ್ರೀಯ ಹೆದ್ದಾರಿ-50 ಹಾಗೂ ಬೀದರ- ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯೂ ಪಟ್ಟಣದಲ್ಲಿ ಹಾದು ಹೋಗಿರುವುದರಿಂದ ಸಾವಿರಾರು ವಾಹನಗಳು ಸಂಚರಿಸುತ್ತವೆ.</p>.<p>ಬಿಡಾಡಿ ದನಗಳು ರಾತ್ರಿ ಹಗಲೆನ್ನದೆ ರಸ್ತೆಯ ಮೇಲೆ ಮಲಗಿರುವುದರಿಂದ ಅಪಘಾತಗಳು ಸಂಭವಿಸಿ ಹಲವಾರು ದ್ವಿಚಕ್ರವಾಹನ ಸವಾರರು ಗಾಯಗೊಂಡಿದ್ದಾರೆ. ಈ ಕುರಿತು ಎಚ್ಚರ ವಹಿಸಬೇಕಾದ ಪೊಲೀಸ್ ಇಲಾಖೆ ಮತ್ತು ಪುರಸಭೆ ನಿದ್ರೆಗೆ ಜಾರಿದ್ದು, ಬಿಡಾಡಿ ದನಗಳನ್ನು ನಿಯಂತ್ರಿಸುವವರು ಯಾರು ಎಂಬುದು ಸಾರ್ವಜನಿಕರ ಅಹವಾಲಾಗಿದೆ.</p>.<p>ಪಟ್ಟಣದ ಡಾ.ಅಂಬೇಡ್ಕರ್ ಸರ್ಕಲ್ ದಿಂದ ಕನಕದಾಸ ವೃತ್ತದ ವರೆಗಿನ ಮುಖ್ಯ ರಸ್ತೆಯ ಮೇಲೆ ಮಂಗಳವಾರ ನಡೆಯುವ ಸಂತೆಯಲ್ಲೂ ದನಗಳ ಹಾವಳಿ ಮಿತಿಮೀರಿದೆ. ಕಿರಿದಾದ ರಸ್ತೆಯಲ್ಲಿ ಸಂತೆ ನಡೆಯುವ ಕಾರಣ, ಜನರು ತಿರುಗಾಡಲು ಕಷ್ಟ ಪಡುತ್ತಾರೆ. ಇಂತಹ ಸ್ಥಿತಿಯಲ್ಲಿ ಹಣ್ಣು-ತರಕಾರಿಗಾಗಿ ದನಗಳ ಹಿಂಡು ಸಂತೆಯಲ್ಲಿ ನುಗ್ಗಿ ಜನರಿಗೆ ತೊಂದರೆ ಮಾಡುತ್ತಿವೆ.</p>.<p>ಬೀದಿ ಬದಿಯ ಹೂವು-ಹಣ್ಣು ಸೇರಿದಂತೆ ಇತರೆ ದಿನಸಿ ವ್ಯಾಪಾರಿಗಳು ಕೂಡ ಬಿಡಾಡಿ ದನಗಳ ಹಾವಳಿಗೆ ತೀವ್ರ ಬೇಸತ್ತು ಹೋಗಿದ್ದಾರೆ. ವ್ಯಾಪಾರ ನಡೆಸುವುದೇ ದುಸ್ತರವಾಗಿದೆ. ಸ್ವಲ್ಪ ಯಾಮಾರಿದರೂ ತರಕಾರಿಗಳಿಗೆ ಬಾಯಿ ಹಾಕಿ ಚೆಲ್ಲಾಪಿಲ್ಲಿ ಮಾಡುತ್ತವೆ ಎಂಬುದು ತರಕಾರಿ-ಹಣ್ಣು ವ್ಯಾಪಾರಸ್ಥರ ಗೋಳಾಗಿದೆ.</p>.<p>ಪೊಲೀಸ್ ಇಲಾಖೆ ಹಾಗೂ ಪುರಸಭೆ ಆಡಳಿತ ಈಗಲಾದರೂ ಎಚ್ಚೆತ್ತುಕೊಂಡು ಬಿಡಾಡಿ ದನಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ದನಗಳ ನಿಯಂತ್ರಣಕ್ಕೆ ಮುಂದಾಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>