ನಗರದ ರೈಲು ನಿಲ್ದಾಣ ರಸ್ತೆ, ಹೊನಗುಂಟಾ ವೃತ್ತ, ಶ್ರೀರಾಮ ವೃತ್ತ, ತ್ರಿಶೂಲ ವೃತ್ತ, ಶಾಸ್ತ್ರಿ ವೃತ್ತ, ಮಿಲತ್ ನಗರ, ರಾಮ ಮೊಹಲ್ಲಾ ಸೇರಿದಂತೆ ಇತರ ಬಡಾವಣೆ ಮತ್ತು ಬೀದಿಗಳಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ. ಅಲ್ಲಲ್ಲಿ ಗುಂಪು-ಗುಂಪಾಗಿ ಸಾಗುವ ಶ್ವಾನಗಳ ಹಿಂಡು ದಾರಿಯಲ್ಲಿ ಸಾಗುವವರನ್ನು ಕಂಡ ಕೂಡಲೇ ಬೊಗಳುತ್ತ ಕಚ್ಚಲು ಮುಂದಾಗುತ್ತಿವೆ. ಇದರಿಂದ ಜನರು ಭಯದಲ್ಲೇ ಓಡಾಡುವಂತಾಗಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳಿಗೆ ಬೀದಿ ನಾಯಿಗಳು ಕಚ್ಚಿದ ಅನೇಕ ಪ್ರಕರಣಗಳಿವೆ.