<p><strong>ಕಲಬುರ್ಗಿ</strong>: 2020-21ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಾಮಾಜಿಕ ಅರಿವು ಸಾಂಸ್ಕೃತಿಕ ಕಾರ್ಯಕ್ರಮದಡಿ ಅಸ್ಪೃಶ್ಯತೆಯ ಬಗ್ಗೆ ಅರಿವು ಮೂಡಿಸಲು ಬೀದಿ ನಾಟಕ ಆಯೋಜಿಸಲಾಗುತ್ತಿದೆ.</p>.<p>ಇದಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಂದ ಬೀದಿ ನಾಟಕದ ಹಸ್ತಪ್ರತಿಗಳನ್ನು ಅಹ್ವಾನಿಸಲಾಗಿದೆ ಎಂದು ಕಲಬುರ್ಗಿ ರಂಗಾಯಣ ಆಡಳಿತಾಧಿಕಾರಿ ದತ್ತಪ್ಪ ಸಾಗನೂರ ತಿಳಿಸಿದ್ದಾರೆ.</p>.<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಅಧಿನಿಯಮದ ಬಗ್ಗೆ ಬೀದಿನಾಟಕ ರಚಿಸಬೇಕು. ಆಯ್ಕೆಯಾದ ಒಂದು ನಾಟಕಕ್ಕೆ ಸೂಕ್ತ ಸಂಭಾವನೆ ನೀಡಲಾಗುತ್ತದೆ. ನಾಟಕದ ಆಯ್ಕೆಯ ಅಂತಿಮ ತೀರ್ಮಾನವು ರಂಗಾಯಣದ್ದಾಗಿದೆ.</p>.<p>ನಾಟಕದ ಹಸ್ತಪ್ರತಿಗಳನ್ನು ‘ಆಡಳಿತಾಧಿಕಾರಿ, ರಂಗಾಯಣ ಡಾ.ಸಿದ್ದಯ್ಯ ಪುರಾಣಿಕ ಸಾಂಸ್ಕೃತಿಕ ಸಮುಚ್ಛಯ, ಸೇಡಂ– ಶಹಾಬಾದ್ ವರ್ತುಲ ರಸ್ತೆ, ಕಲಬುರ್ಗಿ-585105’ ಈ ವಿಳಾಸಕ್ಕೆ ಅಥವಾ ರಂಗಾಯಣದ ಇ-ಮೇಲ್ rangayanakalaburagi@gmail.com ವಿಳಾಸಕ್ಕೆ ಜೂನ್ 20ರೊಳಗಾಗಿ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ 08472-227735ಗೆ ಸಂಪರ್ಕಿಸಲು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: 2020-21ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಾಮಾಜಿಕ ಅರಿವು ಸಾಂಸ್ಕೃತಿಕ ಕಾರ್ಯಕ್ರಮದಡಿ ಅಸ್ಪೃಶ್ಯತೆಯ ಬಗ್ಗೆ ಅರಿವು ಮೂಡಿಸಲು ಬೀದಿ ನಾಟಕ ಆಯೋಜಿಸಲಾಗುತ್ತಿದೆ.</p>.<p>ಇದಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಂದ ಬೀದಿ ನಾಟಕದ ಹಸ್ತಪ್ರತಿಗಳನ್ನು ಅಹ್ವಾನಿಸಲಾಗಿದೆ ಎಂದು ಕಲಬುರ್ಗಿ ರಂಗಾಯಣ ಆಡಳಿತಾಧಿಕಾರಿ ದತ್ತಪ್ಪ ಸಾಗನೂರ ತಿಳಿಸಿದ್ದಾರೆ.</p>.<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಅಧಿನಿಯಮದ ಬಗ್ಗೆ ಬೀದಿನಾಟಕ ರಚಿಸಬೇಕು. ಆಯ್ಕೆಯಾದ ಒಂದು ನಾಟಕಕ್ಕೆ ಸೂಕ್ತ ಸಂಭಾವನೆ ನೀಡಲಾಗುತ್ತದೆ. ನಾಟಕದ ಆಯ್ಕೆಯ ಅಂತಿಮ ತೀರ್ಮಾನವು ರಂಗಾಯಣದ್ದಾಗಿದೆ.</p>.<p>ನಾಟಕದ ಹಸ್ತಪ್ರತಿಗಳನ್ನು ‘ಆಡಳಿತಾಧಿಕಾರಿ, ರಂಗಾಯಣ ಡಾ.ಸಿದ್ದಯ್ಯ ಪುರಾಣಿಕ ಸಾಂಸ್ಕೃತಿಕ ಸಮುಚ್ಛಯ, ಸೇಡಂ– ಶಹಾಬಾದ್ ವರ್ತುಲ ರಸ್ತೆ, ಕಲಬುರ್ಗಿ-585105’ ಈ ವಿಳಾಸಕ್ಕೆ ಅಥವಾ ರಂಗಾಯಣದ ಇ-ಮೇಲ್ rangayanakalaburagi@gmail.com ವಿಳಾಸಕ್ಕೆ ಜೂನ್ 20ರೊಳಗಾಗಿ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ 08472-227735ಗೆ ಸಂಪರ್ಕಿಸಲು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>