<p><strong>ಅಫಜಲಪುರ (ಕಲಬುರಗಿ):</strong> ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ, ಇಲ್ಲಿನ ಪಿಯು ಕಾಲೇಜು ಅರ್ಥಶಾಸ್ತ್ರ ಉಪನ್ಯಾಸಕ ರಾಜಕುಮಾರ ಕುಂಬಾರನನ್ನು ಅಫಜಲಪುರ ಠಾಣೆ ಪೊಲೀಸರು ಶನಿವಾರ ರಾತ್ರಿ ಬಂಧಿಸಿದ್ದಾರೆ. ನಂತರ ನ್ಯಾಯಾಧೀಶರ ಎದುರು ಹಾಜರುಪಡಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.</p><p>ಉಪನ್ಯಾಸಕನ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧಿಸುವವರೆಗೂ ತರಗತಿಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದು ಪೋಷಕರು ಹಾಗೂ ಸಾರ್ವಜನಿಕರು ಕಾಲೇಜಿನ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.</p><p>‘ಪ್ರತಿಭಟನೆ ಹಿಂದೆಯೇ ಉಪನ್ಯಾಸಕ ಪರಾರಿಯಾಗಿದ್ದ. ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಕೆಲವೇ ಗಂಟೆಗಳಲ್ಲಿ ಉಪನ್ಯಾಸಕನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ದೂರು ನೀಡಿದ ವಿದ್ಯಾರ್ಥಿನಿ ಅಷ್ಟೇ ಅಲ್ಲದೇ ಇತರೆ ವಿದ್ಯಾರ್ಥಿನಿಯರಿಗೂ ಉಪನ್ಯಾಸಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪಗಳು ಕೇಳಿ ಬಂದಿದ್ದವು.</p>
<p><strong>ಅಫಜಲಪುರ (ಕಲಬುರಗಿ):</strong> ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ, ಇಲ್ಲಿನ ಪಿಯು ಕಾಲೇಜು ಅರ್ಥಶಾಸ್ತ್ರ ಉಪನ್ಯಾಸಕ ರಾಜಕುಮಾರ ಕುಂಬಾರನನ್ನು ಅಫಜಲಪುರ ಠಾಣೆ ಪೊಲೀಸರು ಶನಿವಾರ ರಾತ್ರಿ ಬಂಧಿಸಿದ್ದಾರೆ. ನಂತರ ನ್ಯಾಯಾಧೀಶರ ಎದುರು ಹಾಜರುಪಡಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.</p><p>ಉಪನ್ಯಾಸಕನ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧಿಸುವವರೆಗೂ ತರಗತಿಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದು ಪೋಷಕರು ಹಾಗೂ ಸಾರ್ವಜನಿಕರು ಕಾಲೇಜಿನ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.</p><p>‘ಪ್ರತಿಭಟನೆ ಹಿಂದೆಯೇ ಉಪನ್ಯಾಸಕ ಪರಾರಿಯಾಗಿದ್ದ. ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಕೆಲವೇ ಗಂಟೆಗಳಲ್ಲಿ ಉಪನ್ಯಾಸಕನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ದೂರು ನೀಡಿದ ವಿದ್ಯಾರ್ಥಿನಿ ಅಷ್ಟೇ ಅಲ್ಲದೇ ಇತರೆ ವಿದ್ಯಾರ್ಥಿನಿಯರಿಗೂ ಉಪನ್ಯಾಸಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪಗಳು ಕೇಳಿ ಬಂದಿದ್ದವು.</p>