ಆತ್ಮಹತ್ಯೆ ಸುದ್ದಿ ತಿಳಿದು ಅಪಾರ ಸಂಖ್ಯೆಯ ಜನ ಶಾಲೆಯ ಸುತ್ತ ಸೇರಿದರು. ‘ನಮಗೆ ಯಾರ ಮೇಲೂ ಅನುಮಾನವಿಲ್ಲ. ಮರಣೋತ್ತರ ಪರೀಕ್ಷೆ ನಡೆಸುವುದು ಬೇಡ’ ಎಂದು ಆತನ ಪಾಲಕರೇ ಪೊಲೀಸರ ಮುಂದೆ ಮನವಿ ಮಾಡಿದರು. ಆದರೆ, ಕಾನೂನು ಪ್ರಕಾರ ಮರಣೋತ್ತರ ಪರೀಕ್ಷೆ ನಡೆಸಲೇಬೇಕು ಎಂದು ಮನವರಿಕೆ ಮಾಡಿದ ಪೊಲೀಸರು ಶವವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು.