<p>ಚಿಂಚೋಳಿ: ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮೂಡಿಸಿದರೆ, ಅದು ಬಹುಬೇಗ ಸಮುದಾಯಕ್ಕೆ ತಲುಪಲಿದೆ ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಸುದರ್ಶನ ಬಿರಾದಾರ ಹೇಳಿದರು.</p>.<p>ತಾಲ್ಲೂಕು ವಕೀಲರ ಸಂಘ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ಸೋಮವಾರ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ತಿಳುವಳಿಕೆ ನೀಡಿದರೆ ಅವರು, ತಮ್ಮ ಕುಟುಂಬಸ್ಥರಿಗೆ ಹಾಗೂ ನೆರೆಹೊರೆಯವರಿಗೆ ತಿಳಿಸುತ್ತಾರೆ. ಅವರಿಂದ ಬೇಗನೆ ಸಮುದಾಯದಲ್ಲಿ ಜಾಗೃತಿ ಮೂಡುತ್ತದೆ. ಹೀಗಾಗಿ, ವಿದ್ಯಾರ್ಥಿಗಳು ಕಾನೂನಿನ ಜ್ಞಾನ ಬೆಳೆಸಿಕೊಳ್ಳಬೇಕು. ಶೋಷಣೆ, ಅನ್ಯಾಯ ಮತ್ತು ದೌರ್ಜನ್ಯ ತಡೆಯಲು ಮುಂದಾಗಬೇಕು ಎಂದರು.</p>.<p>ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ವಕೀಲರ ಪಾತ್ರ ಕುರಿತು ಮಾತನಾಡಿದ ಹಿರಿಯ ವಕೀಲ ವಿಶ್ವನಾಥ ಬೆನಕಿನ್ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಲ್ಲಿಕಾರ್ಜುನ ಪಾಲಾಮೂರ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿಸಹಾಯಕ ಅಭಿಯೋಜಕ ಶಾಂತಕುಮಾರ ಪಾಟೀಲ, ವಕೀಲ ಶರಣರೆಡ್ಡಿ ಪೊಂಗಾ, ಸುರೇಶ ಚವ್ಹಾಣ ಇದ್ದರು.<br />ವಿದ್ಯಾರ್ಥಿಗಳು ಯುವ ಸಂಸತ್ತು ನಡೆಸಿಕೊಟ್ಟರು. ರಮೇಶ ವೈರಾಗೆ ಸ್ವಾಗತಿಸಿ, ಡಾ. ಫರಹಾ ಬೇಗಂ ನಿರೂಪಿಸಿ, ಶ್ರೀಶೈಲ ಕುಲಾಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮೂಡಿಸಿದರೆ, ಅದು ಬಹುಬೇಗ ಸಮುದಾಯಕ್ಕೆ ತಲುಪಲಿದೆ ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಸುದರ್ಶನ ಬಿರಾದಾರ ಹೇಳಿದರು.</p>.<p>ತಾಲ್ಲೂಕು ವಕೀಲರ ಸಂಘ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ಸೋಮವಾರ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ತಿಳುವಳಿಕೆ ನೀಡಿದರೆ ಅವರು, ತಮ್ಮ ಕುಟುಂಬಸ್ಥರಿಗೆ ಹಾಗೂ ನೆರೆಹೊರೆಯವರಿಗೆ ತಿಳಿಸುತ್ತಾರೆ. ಅವರಿಂದ ಬೇಗನೆ ಸಮುದಾಯದಲ್ಲಿ ಜಾಗೃತಿ ಮೂಡುತ್ತದೆ. ಹೀಗಾಗಿ, ವಿದ್ಯಾರ್ಥಿಗಳು ಕಾನೂನಿನ ಜ್ಞಾನ ಬೆಳೆಸಿಕೊಳ್ಳಬೇಕು. ಶೋಷಣೆ, ಅನ್ಯಾಯ ಮತ್ತು ದೌರ್ಜನ್ಯ ತಡೆಯಲು ಮುಂದಾಗಬೇಕು ಎಂದರು.</p>.<p>ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ವಕೀಲರ ಪಾತ್ರ ಕುರಿತು ಮಾತನಾಡಿದ ಹಿರಿಯ ವಕೀಲ ವಿಶ್ವನಾಥ ಬೆನಕಿನ್ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಲ್ಲಿಕಾರ್ಜುನ ಪಾಲಾಮೂರ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿಸಹಾಯಕ ಅಭಿಯೋಜಕ ಶಾಂತಕುಮಾರ ಪಾಟೀಲ, ವಕೀಲ ಶರಣರೆಡ್ಡಿ ಪೊಂಗಾ, ಸುರೇಶ ಚವ್ಹಾಣ ಇದ್ದರು.<br />ವಿದ್ಯಾರ್ಥಿಗಳು ಯುವ ಸಂಸತ್ತು ನಡೆಸಿಕೊಟ್ಟರು. ರಮೇಶ ವೈರಾಗೆ ಸ್ವಾಗತಿಸಿ, ಡಾ. ಫರಹಾ ಬೇಗಂ ನಿರೂಪಿಸಿ, ಶ್ರೀಶೈಲ ಕುಲಾಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>