ಈ ಸಂದರ್ಭದಲ್ಲಿ ಮಾತನಾಡಿದ ಅಭ್ಯರ್ಥಿಗಳಾದ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಂದಾಳ ಗ್ರಾಮದ ಆದಮ್ ನದಾಫ ಹಾಗೂ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಮುಡಬಿ ಗ್ರಾಮದ ಪವನ್ ವಿಜಯಕುಮಾರ್, ‘ಬೆಳಿಗ್ಗೆಯೇ ಎದ್ದು ಗಂಟೆಗಟ್ಟಲೇ ಪ್ರಯಾಣ ಮಾಡಿ ಬರುವಷ್ಟರಲ್ಲಿ ಸಮಯ ಮೀರಿದೆ ಎಂದು ಅಧಿಕಾರಿಗಳು ತಿಳಿಸಿದರು. ಮಾನವೀಯತೆ ದೃಷ್ಟಿಯಿಂದ ನಮಗೆ ಅವಕಾಶ ಕೊಡಬೇಕಾಗಿತ್ತು. ಬಡತನದ ಹಿನ್ನೆಲೆಯಲ್ಲಿ ಬಂದಿರುವ ನಾವು ಕಷ್ಟಪಟ್ಟು ಅರ್ಜಿ ಸಲ್ಲಿಸಿದ್ದೆವು. ನಮ್ಮಂತಹ 100ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಪರೀಕ್ಷೆ ಅವಕಾಶ ನಿರಾಕರಿಸಲಾಗಿದೆ’ ಎಂದು ದೂರಿದರು.