ಮುಡಬೂಳ, ಭಾಗೋಡಿ, ಕದ್ದರಗಿ, ಜೀವಣಗಿ ಗ್ರಾಮದ ವಿದ್ಯಾರ್ಥಿಗಳು ಶಾಲೆ ಮುಗಿಸಿಕೊಂಡು ಸಂಜೆ 4.30ಕ್ಕೆ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. 5 ಗಂಟೆಗೆ ಅಗಮಿಸಬೇಕಾದ ಬಸ್ ಸಂಜೆ 7 ಗಂಟೆಯಾದರೂ ಬಾರದಿದ್ದಾಗ ನೂರಾರು ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು ರೊಚ್ಚಿಗೆದ್ದು ಬಸ್ ನಿಲ್ದಾಣದಲ್ಲಿಯೇ ಸಾರಿಗೆ ಅಧಿಕಾರಿ ವಿರುದ್ಧ ಘೋಷಣೆ ಕೂಗಿ, ಯಾವುದೇ ಬಸ್ ನಿಲ್ದಾಣದಿಂದ ಹೊರಗಡೆ ಹೋಗದಂತೆ ತಡೆದು ಆಕ್ರೋಶ ವ್ಯಕ್ತ ಮಾಡಿದರು.